ವಿಧವೆಯರು, ಗಂಡನಿಂದ ದೂರವಾಗಿರುವವರು ಅಥವಾ ಮದುವೆಯಾಗದೆ ಒಬ್ಬಂಟಿಯಾಗಿ ಜೀವಿಸುತ್ತಿರುವ ಮಹಿಳೆರಿಗೆ ಆರ್ಥಿಕ ಭದ್ರತೆ ನೀಡುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಮನಸ್ವಿನೀ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ ತಿಂಗಳು ರೂ 800 ಪಿಂಚಣಿ ಸಿಗುತ್ತದೆ. ಮಾತ್ರವಲ್ಲ ವೃದ್ಧಾಪ್ಯ ವೇತನದ ಮಾದರಿಯಲ್ಲೇ ನೇರವಾಗಿ ಫಲಾನುಭವಿಯ ಖಾತೆಗೆ ಜಮೆ ಆಗುತ್ತದೆ. ಈ ಯೋಜನೆಯ ನಿಯಮದ ಪ್ರಕಾರ ಈಗಾಗಲೇ ವಿಧವಾ ವೇತನ, ಅಂಗವಿಕಲ ವೇತನ ಅಥವಾ ಸಂಧ್ಯ ಸುರಕ್ಷ ಪಡೆಯುತ್ತಿರುವವರು ಹಾಗೂ ಮರುಮದುವೆ ಆದವರಿಗೆ ಈ ಪಿಂಚಣಿಯು ಸಿಗುವುದಿಲ್ಲ.
ಬೇಕಾಗುವ ದಾಖಲೆ:
• ಬಿಪಿಎಲ್ ರೇಷನ್ ಕಾರ್ಡ್
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಚುನಾವಣಾ ಗುರುತಿನ ಚೀಟಿ
• ಅವಿವಾಹಿತರಾಗಿದ್ದರೆ-ಮರುಮದುವೆ ಆಗಿಲ್ಲ ಎಂಬ ಪ್ರಮಾಣ ಪತ್ರ
• ವಿಚ್ಛೇದಾರರಿಗೆ- ಗಂಡನಿಂದ ದೂರವಾಗಿರುವ ಪ್ರಮಾಣ ಪತ್ರ
• ಪಾಸ್ಪೋರ್ಟ್ ಅಳತೆಯ ಪೋಟೋ
ಅರ್ಜಿ ಸಲ್ಲಿಸುವ ವಿಧಾನ:
ನಿಮ್ಮ ಹತ್ತಿರದ ನಾಡಕಚೇರಿ ಅಥವಾ ಅಟಲ್ ಜೀ ಜನಸ್ನೇಹಿ ಕೇಂದ್ರ ಕ್ಕೇ ಭೇಟಿ ನೀಡಬೇಕು. ಅಲ್ಲಿ ಫಾರಂ ಪಡೆದು ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಆನ್ ಲೈನ್ ವ್ಯವಸ್ಥೆ ಬಂದಿಲ್ಲ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…