ಸ್ವರಕ್ಷಣೆಯ ವಿಚಾರದಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಗತ್ಯವಾಗಿದ್ದು, ಮುಂದಿನ ದಿನದಲ್ಲಿ ಕಾರ್ಯಾಗಾರಗಳನ್ನು ನಡೆಸಲಾಗುವುದು. ಸರ್ಕಾರದಿಂದ ಎಲ್ಲಾ ಸಿಗುತ್ತದೆ ಎಂದು ಕಾಯದೆ, ನಮ್ಮಿಂದಾಗುವುದನ್ನು ಸಮಾಜಕ್ಕೆ ನೀಡುವ ಕೆಲಸವನ್ನು ಮುಳಿಯ ಮಾಡುತ್ತಿದೆ. ಸಂಸ್ಥೆಯ ಸಿಬ್ಬಂದಿಗಳಿಗೆ ಸೇರಿ ಆಸುಪಾಸಿನ ಜನರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ ಎಂದು ಮುಳಿಯ ಜ್ಯುವೆಲ್ಸ್ನ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಹೇಳಿದರು.
ಜೆಸಿಐ ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಮುಳಿಯ ಜ್ಯುವೆಲ್ಸ್ ಪುತ್ತೂರು, ಮಹಿಳಾ ಪೊಲೀಸ್ ಠಾಣೆ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಯುವ ಸಹಯೋಗದಲ್ಲಿ ನಡೆದ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪುತ್ತೂರು ಮಹಿಳಾ ಠಾಣೆಯಾ ಉಪನಿರೀಕ್ಷಕಿ ಭವಾನಿ ಮಾತನಾಡಿ ಪೊಕ್ಸೋ ಕಾಯ್ದೆಯಲ್ಲಿ ೧೮ ವರ್ಷದ ಒಳಗಿನ ಗಂಡು ಹೆಣ್ಣು ಬೇಧವಿಲ್ಲದೆ ಮಕ್ಕಳೆಂದು ಪರಿಗಣಿಸಲಾಗುತ್ತದೆ. ಪ್ರಕರಣಗಳಲ್ಲಿ ದೂರು ದಾಖಲಾದಾಗ ಕೇವಲ ಆರೋಪಿಗಳಾಗಿದ್ದರೆ, ಪೊಕ್ಸೋದಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಅವರು ಅಪರಾಧಿಗಳಾಗಿರುತ್ತಾರೆ. ಪೋಷಕರು ತಮ್ಮ ಮಕ್ಕಳ ಚಲನವಲಗಳ ಬಗ್ಗೆ ನಿಗಾ ಇಡುವ ಜತೆಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ತಿಳಿಸಿದರು.
ಪೊಲೀಸ್ ಸಿಬ್ಬಂದಿಗಳಿಗೆ ಮುಳಿಯ ಜ್ಯುವೆಲ್ಸ್ ವತಿಯಿಂದ ರೈನ್ ಕೋಟ್ ವಿತರಣೆ ಮಾಡಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ, ಪುತ್ತೂರು ಮಹಿಳಾ ಠಾಣೆಯಾ ಉಪನಿರೀಕ್ಷಕಿ ಸರಿತಾ ಉಪಸ್ಥಿತರಿದ್ದರು.
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…
ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…
ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ ಕಲಬುರಗಿಯಲ್ಲಿ …
ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನ ಸಹಾಯ ನೀಡುವುದು ಮತ್ತು ರೈತರ…
ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…
ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.