ಸುದ್ದಿಗಳು

ಪಂಜದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧಕ ಮಹಿಳೆಯರಿಗೆ ಸನ್ಮಾನ | ಸಮಾಜಕ್ಕೆ ಪಾಸಿಟಿವ್‌ ಮಹಿಳೆಯರನ್ನು ಪರಿಚಯಿಸಿದ ಮಹಿಳಾ ತಂಡಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಿಳೆಯರ ಸಮಾನತೆ ವಿಚಾರ ನೋಡಿದಾಗ ಮೊದಲಿಗಿಂತ ಬಹಳಷ್ಟು ಬದಲಾವಣೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಉತ್ತಮ ರೀತಿಯ ಸೇವೆ ನೀಡುತ್ತಿದ್ದು , ಅಪಾರ ಕೊಡುಗೆಗಳು ಸಮಾಜಕ್ಕೆ ನೀಡುತ್ತಿದ್ದಾರೆ ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ದೇರಾಜೆ ಹೇಳಿದರು.

Advertisement
Advertisement

ಅವರು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಸಭಾಭವನದಲ್ಲಿ ನಡೆದ ‘ವಿಶ್ವ ಮಹಿಳಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿದರು.  ಭಾರತ ಸರಕಾರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರೂ ಯುವ ಕೇಂದ್ರ ಮಂಗಳೂರು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಸುಳ್ಯ, ವನಿತಾ ಸಮಾಜ ಪಂಜ, ಗ್ರಾಮ ಪಂಚಾಯತ್ ಪಂಜ ಇವುಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಪಂಜ ವನಿತಾ ಸಮಾಜದ ಅಧ್ಯಕ್ಷೆ  ಪುಷ್ಪಾ ಡಿ.ಪ್ರಸಾದ್ ಕಾನತ್ತೂರ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ  ರಶ್ಮಿ ಅಶೋಕ್ ಮಾತನಾಡಿ ” ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆ ಪೂಜ್ಯನೀಯ ಸ್ಥಾನವಿದೆ. ತನ್ನ ಮಕ್ಕಳನ್ನು ಸಂಸ್ಕಾರದ ಶಿಕ್ಷಣದೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದು.”ಎಂದು ಅವರು ಹೇಳಿದರು

ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಚಂಚಲ ತೇಜೋಮಯ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ  ತ್ರಿವೇಣಿ ದಾಮ್ಲ ಮಾತನಾಡಿದರು. ವನಿತಾ ಸಮಾಜದ ಕಾರ್ಯದರ್ಶಿ ಭಾಗೀರಥಿ ಕರಿಕ್ಕಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಳ್ಯ ತಾ. ಮಹಿಳಾ ಮಂಡಲಗಳ ಒಕ್ಕೂಟದ ಉಪಾಧ್ಯಕ್ಷೆ  ಮಧುಮತಿ ಬೊಳ್ಳೂರು ವಂದಿಸಿದರು.

ಸಾಧಕ ಮಹಿಳೆಯರಿಗೆ ಸನ್ಮಾನ ಸಮಾರಂಭ: ವನಿತಾ ಸಮಾಜಕ್ಕೆ ಧ್ವಜಸ್ತಂಭ ದಾನಿಗಳಾದ ವಿಶ್ರಾಂತಿ ಪ್ರಾಧ್ಯಾಪಕಿ  ಲೀಲಾವತಿ, ವಿಶ್ರಾಂತ ಪ್ರಾಂಶುಪಾಲ ಬಾಲಕೃಷ್ಣ ಗೌಡ ನೇರಳ,ಸಮಾಜಕ್ಕೆ ಮಾದರಿಯಾಗಿ ಜೀವನ ನಡೆಸುತ್ತಿರುವ ಚಾಂದಿನಿ ಪುರುಷೋತ್ತಮ, ವನಿತಾ ಸಮಾಜದ ಅಧ್ಯಕ್ಷೆ  ಪುಷ್ಪಾ ಡಿ.ದೇವಿಪ್ರಸಾದ್ ಕಾನತ್ತೂರ್ ರವರನ್ನು ಸನ್ಮಾನಿಸಲಾಯಿತು. ಚಿತ್ರಕಲಾ ಬೊಳ್ಳಾಜೆ,  ಚಂದ್ರಾಕ್ಷಿ ಜೆ ರೈ ಸನ್ಮಾನಿತರ ಪರಿಚಯಿಸಿದರು.

Advertisement

ಕಾರ್ಯಕ್ರಮದಲ್ಲಿ ವನಿತಾ ಸಮಾಜದ ಎಲ್ಲಾ ಸದಸ್ಯರು ಆಶಾಯ ಗೀತೆ ಹಾಡಿದರು. ವನಿತಾ ಸಮಾಜದ ಗೌರವಾಧ್ಯಕ್ಷೆ  ಹೇಮಲತಾ ಜನಾರ್ಧನ ಸ್ವಾಗತಿಸಿದರು. ಸುಮಾ ಕುದ್ವ,  ಲತಾ ಮುಡೂರು,  ಸ್ಪರ್ಣಶ್ರೀ ಅತಿಥಿಗಳನ್ನು ಪರಿಚಯಿಸಿದರು. ರತ್ನಾವತಿ ಬೊಳ್ಳಾಜೆ ಮತ್ತು ಪವಿತ್ರ ರಾಜೇಶ್ ಕುದ್ವ ಮಲ್ಲೆಟಿ ನಿರೂಪಿಸಿದರು.

ಪಾಸಿಟಿವ್‌ ಬದುಕು - ಬದುಕಿಗೆ ನಾಳೆ ಇದೆ

ಮಹಿಳಾ ದಿನಾಚರಣೆಯ ಸಂದರ್ಭ ಸಮಾಜಕ್ಕೆ ಮಾದರಿಯಾಗಿ ಜೀವನ ನಡೆಸುತ್ತಿರುವ ಚಾಂದಿನಿ ಪುರುಷೋತ್ತಮ ಅವರನ್ನು ಗೌರವಿಸಲಾಯಿತು. ಧನಾತ್ಮಕ ಬದುಕಿನ ಮೂಲಕ ಸಮಾಜದ ಅನೇಕರಿಗೆ ಮಾದರಿಯಾಗಿದ್ದಾರೆ. ಎಳವೆಯಿಂದಲೇ ಆರೋಗ್ಯದ ಸಮಸ್ಯೆ ಕಾಡುತ್ತಿದ್ದರೂ ಸಮರ್ಥವಾಗಿ ಎದುರಿಸಿ ಪಾಸಿಟಿವ್‌ ಬದುಕು ಅಗತ್ಯ ಎಂದು ಮಹಿಳೆಯಾಗಿ ಸಾಧಿಸಿ ತೋರಿಸಿದ್ದರು. ಚಾಂದಿನಿ ಅವರ ಪಾಸಿಟಿವ್‌ ಬದುಕಿನ  ಪ್ರೇರಣೆಯನ್ನು ರೂರಲ್‌ ಮಿರರ್‌ ಇವರನ್ನು ಸಮಾಜಕ್ಕೆ ಪರಿಚಯಿಸಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

2 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

3 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

3 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

3 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

3 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

4 hours ago