#Women’sReservationBill | ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಮಹಿಳಾ ಮೀಸಲಾತಿ ಮಸೂದೆ | 26 ವರ್ಷಗಳ ಬಳಿಕ ಸಿಕ್ಕ ಅನುಮೋದನೆ

September 19, 2023
10:38 AM
ಮಹಿಳಾ ಮೀಸಲಾತಿ ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33 ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡುವ ಗುರಿಯನ್ನು ಹೊಂದಿದೆ. ಇದಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾದ ಸ್ಥಾನಗಳಲ್ಲಿ ಮೂರನೇ ಒಂದು ಭಾಗವನ್ನು ಈ ಸಮುದಾಯಗಳ ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಅದು ಷರತ್ತು ವಿಧಿಸುತ್ತದೆ.

ಕಳೆದ 2 ದಶಕಗಳಿಗಿಂತಲೂ ಹೆಚ್ಚು ಕಾಲ ಅನುಮೋದನೆಗಾಗಿ ಪರ ವಿರೋಧ ಪಕ್ಷಗಳ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆ (Women’s Reservation Bill) ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆ ಅಂಗೀಕಾರವಾದರೆ ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಅಂದರೆ ಶೇಕಡ 33ರಷ್ಟು ಸ್ಥಾನಗಳು ಮೀಸಲಾಗಲಿವೆ.

ಕಳೆದ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ
April 17, 2026
1:55 PM
by: ಸಾಯಿಶೇಖರ್ ಕರಿಕಳ
ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror