Advertisement
ಸುದ್ದಿಗಳು

#Women’sReservationBill | ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಮಹಿಳಾ ಮೀಸಲಾತಿ ಮಸೂದೆ | 26 ವರ್ಷಗಳ ಬಳಿಕ ಸಿಕ್ಕ ಅನುಮೋದನೆ

Share

ಕಳೆದ 2 ದಶಕಗಳಿಗಿಂತಲೂ ಹೆಚ್ಚು ಕಾಲ ಅನುಮೋದನೆಗಾಗಿ ಪರ ವಿರೋಧ ಪಕ್ಷಗಳ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆ (Women’s Reservation Bill) ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆ ಅಂಗೀಕಾರವಾದರೆ ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಅಂದರೆ ಶೇಕಡ 33ರಷ್ಟು ಸ್ಥಾನಗಳು ಮೀಸಲಾಗಲಿವೆ.

ಕಳೆದ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

15 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

21 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

21 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

21 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

21 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

21 hours ago