Advertisement
ಸುದ್ದಿಗಳು

#Women’sReservationBill | ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಮಹಿಳಾ ಮೀಸಲಾತಿ ಮಸೂದೆ | 26 ವರ್ಷಗಳ ಬಳಿಕ ಸಿಕ್ಕ ಅನುಮೋದನೆ

Share

ಕಳೆದ 2 ದಶಕಗಳಿಗಿಂತಲೂ ಹೆಚ್ಚು ಕಾಲ ಅನುಮೋದನೆಗಾಗಿ ಪರ ವಿರೋಧ ಪಕ್ಷಗಳ ಎಳೆದಾಟಕ್ಕೆ ಕಾರಣವಾಗಿದ್ದ ಮಹಿಳಾ ಮೀಸಲಾತಿ ಮಸೂದೆ (Women’s Reservation Bill) ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಸೋಮವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಮೂಲಗಳು ತಿಳಿಸಿವೆ. ಈ ಮಸೂದೆ ಅಂಗೀಕಾರವಾದರೆ ಸಂಸತ್ತು ಮತ್ತು ಅಸೆಂಬ್ಲಿಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ ಅಂದರೆ ಶೇಕಡ 33ರಷ್ಟು ಸ್ಥಾನಗಳು ಮೀಸಲಾಗಲಿವೆ.

ಕಳೆದ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಮಸೂದೆಯನ್ನು ಅಂಗೀಕರಿಸುವಂತೆ ಒತ್ತಾಯಿಸಿದ್ದವು. ವಿಶೇಷ ಅಧಿವೇಶನದಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಮಸೂದೆಯನ್ನು ಅಂಗೀಕರಿಸಬೇಕು ಎಂದು ಒತ್ತಾಯಿಸಲಾಗಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಸಭೆಯ ನಂತರ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, “ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ ಎಂದು ತಿಳಿಸಿದ್ದರು.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಮಸೂದೆ ಮಂಡನೆಯಾಗಿ ಹಲವು ವರ್ಷಗಳೇ ಕಳೆದಿವೆ. ಇದಕ್ಕೆ ಸಂಸತ್‌ನ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ. ಮಹಿಳಾ ಸಂಸದರು ಲೋಕಸಭೆಯ 15% ಗಿಂತ ಕಡಿಮೆ ಪಾಲನ್ನು ಹೊಂದಿದ್ದಾರೆ. ಮಹಿಳೆಯರ ಪ್ರಾತಿನಿಧ್ಯವು ಅನೇಕ ರಾಜ್ಯಗಳ ವಿಧಾನಸಭೆಗಳಲ್ಲಿ 10% ಗಿಂತ ಕಡಿಮೆಯಾಗಿದೆ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

3 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

3 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

11 hours ago