ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

February 26, 2025
6:26 AM

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಆಶ್ರಯದಲ್ಲಿ ಮಹಿಳಾ ಸ್ವಾವಲಂಬನೆಯನ್ನು ಬೆಂಬಲಿಸಿ ‘ಅವ್ವ ಸಂತೆ’ ಆಯೋಜಿಸಲಾಗಿತ್ತು.ಮಹಿಳಾ ಸಂಘಟನೆಗಳು ತಯಾರಿಸಿದ  ಶೇಂಗಾ ಎಣ್ಣೆ, ಕೊಬ್ಬರಿ ಎಣ್ಣೆ, ಜೇನುತುಪ್ಪ, ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ಬಾಳೆ ನಾರಿನ ಉತ್ಪನ್ನ, ಖಾದಿ ಬಟ್ಟೆ, ಆಹಾರ ಉತ್ಪನ್ನ ಸೇರಿದಂತೆ   ಬಗೆಬಗೆಯ   ಉತ್ಪನ್ನಗಳ  ಪ್ರದರ್ಶನ  ಹಮ್ಮಿಕೊಳ್ಳಲಾಗಿತ್ತು.

Advertisement

ನಾಲ್ಕು ವರ್ಷದಿಂದ  ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜೀವನ್ಮುಖಿ ಸಂಘಟನೆಯ ಸಂಘಟಕರಾದ ಚೂಡಮಣಿ ರಾಮಚಂದ್ರ ಹೇಳುತ್ತಾರೆ.

ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ-ಎಫ್ ಎಂಇ ಯೋಜನೆಯಡಿ ಆಹಾರ ಉತ್ಪನ್ನಗಳ ತಯಾರಿಕೆಗಾಗಿ ಆರ್ಥಿಕ ಸಹಾಯ ಪಡೆದಿದ್ದು, ಇದರಿಂದ  ಗಾಣದಲ್ಲಿ ತಯಾರಿಸಿದ ಕೊಬ್ಬರಿ ಎಣ್ಣೆ , ಶೇಂಗಾ ಎಣ್ಣೆ ತಯಾರು ಮಾಡಲಾಗುತ್ತಿದೆ. ಇದರ ಜೊತೆಗೆ ಬಗೆ ಬಗೆಯ ಉತ್ಪನ್ನಗಳನ್ನು ತಯಾರಿಸಿ, ಮಾರಾಟ ಮಾಡಲಾಗುತ್ತಿದೆ ಎಂದು ಫಲಾನುಭವಿ ಅಮೃತಾ ಕಾಕಲ್ ಹೇಳುತ್ತಾರೆ.

ಉತ್ಪನ್ನಗಳ ತಯಾರಕರಾದ ಸ್ನೇಹ ಜೈನ್ ಅವರು  ಸೌಂದರ್ಯ ವರ್ಧಕ ಉತ್ಪನ್ನಗಳನ್ನು ತಯಾರು ಮಾಡಿ,  ಅವುಗಳನ್ನು ಮಹಿಳೆಯರೇ ಮಾರಾಟ  ಮಾಡಿದ್ದು, ಅವುಗಳಿಗೆ ಉತ್ತಮ ಮಾರುಕಟ್ಟೆ ದೊರೆಯುತ್ತಿದೆ ಎಂದು ಹೇಳಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror