Advertisement
MIRROR FOCUS

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

Share

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಆಶ್ರಯದಲ್ಲಿ ಮಹಿಳಾ ಸ್ವಾವಲಂಬನೆಯನ್ನು ಬೆಂಬಲಿಸಿ ‘ಅವ್ವ ಸಂತೆ’ ಆಯೋಜಿಸಲಾಗಿತ್ತು.ಮಹಿಳಾ ಸಂಘಟನೆಗಳು ತಯಾರಿಸಿದ  ಶೇಂಗಾ ಎಣ್ಣೆ, ಕೊಬ್ಬರಿ ಎಣ್ಣೆ, ಜೇನುತುಪ್ಪ, ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ಬಾಳೆ ನಾರಿನ ಉತ್ಪನ್ನ, ಖಾದಿ ಬಟ್ಟೆ, ಆಹಾರ ಉತ್ಪನ್ನ ಸೇರಿದಂತೆ   ಬಗೆಬಗೆಯ   ಉತ್ಪನ್ನಗಳ  ಪ್ರದರ್ಶನ  ಹಮ್ಮಿಕೊಳ್ಳಲಾಗಿತ್ತು.

ನಾಲ್ಕು ವರ್ಷದಿಂದ  ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜೀವನ್ಮುಖಿ ಸಂಘಟನೆಯ ಸಂಘಟಕರಾದ ಚೂಡಮಣಿ ರಾಮಚಂದ್ರ ಹೇಳುತ್ತಾರೆ.

ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ-ಎಫ್ ಎಂಇ ಯೋಜನೆಯಡಿ ಆಹಾರ ಉತ್ಪನ್ನಗಳ ತಯಾರಿಕೆಗಾಗಿ ಆರ್ಥಿಕ ಸಹಾಯ ಪಡೆದಿದ್ದು, ಇದರಿಂದ  ಗಾಣದಲ್ಲಿ ತಯಾರಿಸಿದ ಕೊಬ್ಬರಿ ಎಣ್ಣೆ , ಶೇಂಗಾ ಎಣ್ಣೆ ತಯಾರು ಮಾಡಲಾಗುತ್ತಿದೆ. ಇದರ ಜೊತೆಗೆ ಬಗೆ ಬಗೆಯ ಉತ್ಪನ್ನಗಳನ್ನು ತಯಾರಿಸಿ, ಮಾರಾಟ ಮಾಡಲಾಗುತ್ತಿದೆ ಎಂದು ಫಲಾನುಭವಿ ಅಮೃತಾ ಕಾಕಲ್ ಹೇಳುತ್ತಾರೆ.

ಉತ್ಪನ್ನಗಳ ತಯಾರಕರಾದ ಸ್ನೇಹ ಜೈನ್ ಅವರು  ಸೌಂದರ್ಯ ವರ್ಧಕ ಉತ್ಪನ್ನಗಳನ್ನು ತಯಾರು ಮಾಡಿ,  ಅವುಗಳನ್ನು ಮಹಿಳೆಯರೇ ಮಾರಾಟ  ಮಾಡಿದ್ದು, ಅವುಗಳಿಗೆ ಉತ್ತಮ ಮಾರುಕಟ್ಟೆ ದೊರೆಯುತ್ತಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

7 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

8 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

9 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

9 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

23 hours ago