ಶಿವಮೊಗ್ಗ ಜಿಲ್ಲೆಯ ಸಾಗರದ ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಆಶ್ರಯದಲ್ಲಿ ಮಹಿಳಾ ಸ್ವಾವಲಂಬನೆಯನ್ನು ಬೆಂಬಲಿಸಿ ‘ಅವ್ವ ಸಂತೆ’ ಆಯೋಜಿಸಲಾಗಿತ್ತು.ಮಹಿಳಾ ಸಂಘಟನೆಗಳು ತಯಾರಿಸಿದ ಶೇಂಗಾ ಎಣ್ಣೆ, ಕೊಬ್ಬರಿ ಎಣ್ಣೆ, ಜೇನುತುಪ್ಪ, ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ಬಾಳೆ ನಾರಿನ ಉತ್ಪನ್ನ, ಖಾದಿ ಬಟ್ಟೆ, ಆಹಾರ ಉತ್ಪನ್ನ ಸೇರಿದಂತೆ ಬಗೆಬಗೆಯ ಉತ್ಪನ್ನಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ನಾಲ್ಕು ವರ್ಷದಿಂದ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜೀವನ್ಮುಖಿ ಸಂಘಟನೆಯ ಸಂಘಟಕರಾದ ಚೂಡಮಣಿ ರಾಮಚಂದ್ರ ಹೇಳುತ್ತಾರೆ.
ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ-ಎಫ್ ಎಂಇ ಯೋಜನೆಯಡಿ ಆಹಾರ ಉತ್ಪನ್ನಗಳ ತಯಾರಿಕೆಗಾಗಿ ಆರ್ಥಿಕ ಸಹಾಯ ಪಡೆದಿದ್ದು, ಇದರಿಂದ ಗಾಣದಲ್ಲಿ ತಯಾರಿಸಿದ ಕೊಬ್ಬರಿ ಎಣ್ಣೆ , ಶೇಂಗಾ ಎಣ್ಣೆ ತಯಾರು ಮಾಡಲಾಗುತ್ತಿದೆ. ಇದರ ಜೊತೆಗೆ ಬಗೆ ಬಗೆಯ ಉತ್ಪನ್ನಗಳನ್ನು ತಯಾರಿಸಿ, ಮಾರಾಟ ಮಾಡಲಾಗುತ್ತಿದೆ ಎಂದು ಫಲಾನುಭವಿ ಅಮೃತಾ ಕಾಕಲ್ ಹೇಳುತ್ತಾರೆ.
ಉತ್ಪನ್ನಗಳ ತಯಾರಕರಾದ ಸ್ನೇಹ ಜೈನ್ ಅವರು ಸೌಂದರ್ಯ ವರ್ಧಕ ಉತ್ಪನ್ನಗಳನ್ನು ತಯಾರು ಮಾಡಿ, ಅವುಗಳನ್ನು ಮಹಿಳೆಯರೇ ಮಾರಾಟ ಮಾಡಿದ್ದು, ಅವುಗಳಿಗೆ ಉತ್ತಮ ಮಾರುಕಟ್ಟೆ ದೊರೆಯುತ್ತಿದೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…