Advertisement
MIRROR FOCUS

ಮಹಿಳಾ ಸ್ವಾವಲಂಬನೆಗೆ ಆದ್ಯತೆ | ಶಿವಮೊಗ್ಗದಲ್ಲಿ ‘ಅವ್ವ ಸಂತೆ’ ಆಯೋಜನೆ

Share

ಶಿವಮೊಗ್ಗ ಜಿಲ್ಲೆಯ ಸಾಗರದ  ಜೀವನ್ಮುಖಿ ಸಂಘಟನೆ ಹಾಗೂ ಭೀಮನಕೋಟೆಯ ಚರಕ ಮಹಿಳಾ  ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಆಶ್ರಯದಲ್ಲಿ ಮಹಿಳಾ ಸ್ವಾವಲಂಬನೆಯನ್ನು ಬೆಂಬಲಿಸಿ ‘ಅವ್ವ ಸಂತೆ’ ಆಯೋಜಿಸಲಾಗಿತ್ತು.ಮಹಿಳಾ ಸಂಘಟನೆಗಳು ತಯಾರಿಸಿದ  ಶೇಂಗಾ ಎಣ್ಣೆ, ಕೊಬ್ಬರಿ ಎಣ್ಣೆ, ಜೇನುತುಪ್ಪ, ಉಪ್ಪಿನಕಾಯಿ, ಹಪ್ಪಳ, ಸಂಡಿಗೆ, ಬಾಳೆ ನಾರಿನ ಉತ್ಪನ್ನ, ಖಾದಿ ಬಟ್ಟೆ, ಆಹಾರ ಉತ್ಪನ್ನ ಸೇರಿದಂತೆ   ಬಗೆಬಗೆಯ   ಉತ್ಪನ್ನಗಳ  ಪ್ರದರ್ಶನ  ಹಮ್ಮಿಕೊಳ್ಳಲಾಗಿತ್ತು.

ನಾಲ್ಕು ವರ್ಷದಿಂದ  ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸಿ, ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜೀವನ್ಮುಖಿ ಸಂಘಟನೆಯ ಸಂಘಟಕರಾದ ಚೂಡಮಣಿ ರಾಮಚಂದ್ರ ಹೇಳುತ್ತಾರೆ.

ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ-ಎಫ್ ಎಂಇ ಯೋಜನೆಯಡಿ ಆಹಾರ ಉತ್ಪನ್ನಗಳ ತಯಾರಿಕೆಗಾಗಿ ಆರ್ಥಿಕ ಸಹಾಯ ಪಡೆದಿದ್ದು, ಇದರಿಂದ  ಗಾಣದಲ್ಲಿ ತಯಾರಿಸಿದ ಕೊಬ್ಬರಿ ಎಣ್ಣೆ , ಶೇಂಗಾ ಎಣ್ಣೆ ತಯಾರು ಮಾಡಲಾಗುತ್ತಿದೆ. ಇದರ ಜೊತೆಗೆ ಬಗೆ ಬಗೆಯ ಉತ್ಪನ್ನಗಳನ್ನು ತಯಾರಿಸಿ, ಮಾರಾಟ ಮಾಡಲಾಗುತ್ತಿದೆ ಎಂದು ಫಲಾನುಭವಿ ಅಮೃತಾ ಕಾಕಲ್ ಹೇಳುತ್ತಾರೆ.

ಉತ್ಪನ್ನಗಳ ತಯಾರಕರಾದ ಸ್ನೇಹ ಜೈನ್ ಅವರು  ಸೌಂದರ್ಯ ವರ್ಧಕ ಉತ್ಪನ್ನಗಳನ್ನು ತಯಾರು ಮಾಡಿ,  ಅವುಗಳನ್ನು ಮಹಿಳೆಯರೇ ಮಾರಾಟ  ಮಾಡಿದ್ದು, ಅವುಗಳಿಗೆ ಉತ್ತಮ ಮಾರುಕಟ್ಟೆ ದೊರೆಯುತ್ತಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

4 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

13 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

14 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

18 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

18 hours ago