ಶುರುವಾಯ್ತು ಹೆದ್ದಾರಿ ಅಭಿವೃದ್ಧಿ ಕಾಲ | ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ | ಇನ್ನು ಮುಂದೆ ಪ್ರಯಾಣ ಬಲು ಸುಲಭ |

March 12, 2023
7:44 PM

ಮೈಸೂರು-ಕುಶಾಲನಗರ  ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

Advertisement
Advertisement

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ

ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

Advertisement

ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು
June 22, 2025
8:00 AM
by: ದ ರೂರಲ್ ಮಿರರ್.ಕಾಂ
ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ
June 21, 2025
11:07 PM
by: The Rural Mirror ಸುದ್ದಿಜಾಲ
ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ
June 21, 2025
9:08 PM
by: ಮಹೇಶ್ ಪುಚ್ಚಪ್ಪಾಡಿ
ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |
June 21, 2025
4:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group