ಶುರುವಾಯ್ತು ಹೆದ್ದಾರಿ ಅಭಿವೃದ್ಧಿ ಕಾಲ | ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ | ಇನ್ನು ಮುಂದೆ ಪ್ರಯಾಣ ಬಲು ಸುಲಭ |

March 12, 2023
7:44 PM

ಮೈಸೂರು-ಕುಶಾಲನಗರ  ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

Advertisement
Advertisement

Advertisement

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ

Advertisement

ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror