ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.
ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.
ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ
ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.
ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…