ಸುದ್ದಿಗಳು

ಶುರುವಾಯ್ತು ಹೆದ್ದಾರಿ ಅಭಿವೃದ್ಧಿ ಕಾಲ | ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ | ಇನ್ನು ಮುಂದೆ ಪ್ರಯಾಣ ಬಲು ಸುಲಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮೈಸೂರು-ಕುಶಾಲನಗರ  ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

Advertisement
Advertisement

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ

ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

Advertisement

ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶಕ್ಕೆ ನಾಲ್ಕು ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ರಾಜ್ಯಸರ್ಕಾರ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…

8 hours ago

ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು ಸಮರ್ಪಕವಾಗಿ ಪೂರೈಸಲು ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…

8 hours ago

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ…

8 hours ago

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

8 hours ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

19 hours ago