Advertisement
ಸುದ್ದಿಗಳು

ಶುರುವಾಯ್ತು ಹೆದ್ದಾರಿ ಅಭಿವೃದ್ಧಿ ಕಾಲ | ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ | ಇನ್ನು ಮುಂದೆ ಪ್ರಯಾಣ ಬಲು ಸುಲಭ |

Share

ಮೈಸೂರು-ಕುಶಾಲನಗರ  ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ

ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

9 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

12 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

21 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

23 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

24 hours ago