Advertisement
ಸುದ್ದಿಗಳು

ಶುರುವಾಯ್ತು ಹೆದ್ದಾರಿ ಅಭಿವೃದ್ಧಿ ಕಾಲ | ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ | ಇನ್ನು ಮುಂದೆ ಪ್ರಯಾಣ ಬಲು ಸುಲಭ |

Share

ಮೈಸೂರು-ಕುಶಾಲನಗರ  ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ

ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago