Advertisement
ಸುದ್ದಿಗಳು

ಶುರುವಾಯ್ತು ಹೆದ್ದಾರಿ ಅಭಿವೃದ್ಧಿ ಕಾಲ | ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಕಾಮಗಾರಿಗೆ ಚಾಲನೆ | ಇನ್ನು ಮುಂದೆ ಪ್ರಯಾಣ ಬಲು ಸುಲಭ |

Share

ಮೈಸೂರು-ಕುಶಾಲನಗರ  ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.

Advertisement

ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.

ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ

ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.

ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

23 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

23 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

23 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

23 hours ago