ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಚಾಲನೆ ಸಿಕ್ಕಿದ್ದು, ಬೆಂಗಳೂರು-ಮಂಗಳೂರು ರಸ್ತೆ ಸಂಚಾರಕ್ಕೆ ವೇಗ ಕಲ್ಪಿಸುವ ಕಾಲ ಸನ್ನಿಹಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿದರು. ಇದರಿಂದ ಹಲವು ವರ್ಷಗಳ ಬೇಡಿಕೆಯಾಗಿದ್ದ ಕುಶಾಲನಗರದಿಂದ ಮಾಣಿವರೆಗಿನ ರಸ್ತೆ ಚತುಷ್ಪಥವಾಗುವ ಕನಸು ನನಸಾಗುತ್ತಿದೆ. ಇದರಿಂದಾಗಿ ಬೆಂಗಳೂರು-ಮಂಗಳೂರು ಪ್ರಯಾಣದ ಸಮಯ ಇಳಿಕೆಯಾಗಲಿದೆ.
ಮೊದಲ ಹಂತವಾಗಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ () ಇಂದು ಲೋಕಾರ್ಪಣೆಗೊಂಡಿತು. ಈ ಯೋಜನೆಯಿಂದ ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹಾಗೂ ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಕ್ಕಂತಾಗಿದೆ. ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಸಮಯ 3 ಗಂಟೆಗಳಿಂದ 75 ನಿಮಿಷಗಳಿಗೆ ಇಳಿಕೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆ ಹಾಗೂ ಕೃಷಿ ಚಟುವಟಿಕೆ ಅಭಿವೃದ್ಧಿಗೂ ಪ್ರೋತ್ಸಾಹ ದಕ್ಕಿದಂತಾಗಿದೆ.
ಇದರ ಮುಂದುವರಿದ ಭಾಗವಾಗಿ 92.33 ಕಿ.ಮೀ ಉದ್ದದ ಮೈಸೂರು-ಕುಶಾಲನಗರ ಚತುಷ್ಪಥ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. 4,128.92 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಮೈಸೂರು-ಕುಶಾಲನಗರ ಚುತುಷ್ಪಥ ಹೆದ್ದಾರಿಯಾದರೆ, ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸುವ ಸಮಯದಲ್ಲಿ ಇಳಿಕೆಯಾಗಲಿದೆ. ಬೆಂಗಳೂರಿನಿಂದ ಕುಶಾಲನಗರಕ್ಕೆ ಪ್ರಯಾಣಿಸಲು ಹಾಲಿ 5 ಗಂಟೆ ಸಮಯ ಬೇಕು. ಚತುಷ್ಪಥ ಹೆದ್ದಾರಿಯಾದರೆ ಈ ಸಮಯ ಎರಡೂವರೆ ಗಂಟೆಗೆ ಇಳಿಯುತ್ತದೆ. ಆ ಮೂಲಕ ಪ್ರಯಾಣಿಕರಿಗೆ ಎರಡೂವರೆ ಗಂಟೆ ಉಳಿತಾಯವಾಗುತ್ತದೆ. ಈ ಹೆದ್ದಾರಿ ಉತ್ತಮ ಸಂಪರ್ಕ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ
ಎರಡನೇ ಹಂತದಲ್ಲಿ ಕುಶಾಲನಗರ-ಸಂಪಾಜೆ, ಮೂರನೇ ಹಂತದಲ್ಲಿ ಸಂಪಾಜೆಯಿಂದ-ಮಾಣಿಗೆ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಲಿದೆ. ಈ ಹಂತದ ಕಾಮಗಾರಿಗೆ ಗ್ರೀನ್ ಸಿಗ್ನಲ್ ಸಿಕ್ಕರೆ, ಬೆಂಗಳೂರು-ಮಂಗಳೂರು ಪ್ರಯಾಣದ ಸಮಯದಲ್ಲಿ ಕಡಿತವಾಗಲಿದೆ.
ಸದ್ಯ ಮೈಸೂರು ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ 395 ಕಿ.ಮೀ ಇದ್ದು ಪ್ರಯಾಣಿಸಲು 8 ರಿಂದ 9 ಗಂಟೆ ಸಮಯ ಬೇಕಾಗುತ್ತದೆ. ಚತುಷ್ಪಥ ರಸ್ತೆಯಾದರೆ ಆ ಸಮಯ 5 ಗಂಟೆಗೆ ಇಳಿಕೆಯಾಗಲಿದೆ. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಿದಂತಾಗುತ್ತದೆ.
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…