ಕೃಷಿಯಲ್ಲಿ ದೂರ ಶಿಕ್ಷಣ ಕುರಿತ ಕಾರ್ಯಗಾರ

July 9, 2025
6:54 AM

ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ ನೀಡಲಾಗುತ್ತಿದೆ. ರೈತರು ಆರ್ಥಿಕವಾಗಿ ಮತ್ತಷ್ಟು ಸಬಲರಾಗಲು ಇದು ಸಹಕಾರಿಯಾಗಿದೆ. ಇತ್ತೀಚೆಗೆ ಕೃಷಿಯಲ್ಲಿ ದೂರ ಶಿಕ್ಷಣ ಪಡೆಯುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ವೈ.ಎನ್ ಶಿವಲಿಂಗಯ್ಯ ಹೇಳಿದರು.

ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿಂದು ಕೃಷಿಯಲ್ಲಿ ದೂರ ಶಿಕ್ಷಣ ಕುರಿತ  ರಾಜ್ಯ ಮಟ್ಟದ ಕಾರ್ಯಗಾರ ಆಯೋಜಿಸಲಾಗಿತ್ತು. ಕೃಷಿಯಲ್ಲಿ ಇತ್ತೀಚಿನ ಆವಿಷ್ಕಾರಗಳು, ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆ ಮಾಹಿತಿ ನೀಡಲಾಯಿತು. ಈ ಸಂದರ್ಭ ಅವರು ಮಾತನಾಡಿದರು. ರೈತರಿಗೆ ತಂತ್ರಜ್ಞಾನ ಮತ್ತು ಪರಿಕರಗಳನ್ನು ಪೂರೈಸುವ ಉದ್ದೇಶದಿಂದ ಕಾರ್ಯಗಾರ ಆಯೋಜಿಸಲಾಗಿದ್ದು, ತಂಜ್ಞರು ಮತ್ತು ವಿಜ್ಞಾನಿಗಳು ಕೃಷಿ ಬೀಜ ಬಿತ್ತನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದರು.

ಜಿಕೆವಿಕೆ ದೂರ ಶಿಕ್ಷಣ ಸಂಯೋಜಕರು ಮತ್ತು ಮುಖ್ಯಸ್ಥ ಡಾ.ಜಿ ಗಂಗಾಧರ್ ಈಶ್ವರ್ ರಾವ್, ಕುಲಸಚಿವ ಡಾ.ಕೆ.ಸಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror