MIRROR FOCUS

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿ ನಡೆಯಿತು.ಗೋತಳಿ ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡ  ಕಾರ್ಯಕ್ರಮ ಇದಾಗಿತ್ತು. ಸಾಕಷ್ಟು ಸಂಖ್ಯೆಯ ಆಸಕ್ತ ಹೈನುಗಾರರು ಭಾಗವಹಿಸಿದ್ದರು.

Advertisement

ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡ ಗೋತಳಿಯ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಹೈನುಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ. ಕೆ ಪಿ ರಮೇಶ್‌, ದೇಸೀ ಗೋತಳಿ ಹಲವು ವಿಶೇಷ ಗುಣಗಳನ್ನು ಹೊಂದಿದೆ. ಅದರಲ್ಲೂ ಮಲೆನಾಡು ಗಿಡ್ಡ ಗೋತಳಿ ಹೆಚ್ಚಿನ ಮಹತ್ವವನ್ನು ಹೊಂದಿದೆ. ದೇಸೀ ತಳಿಯ ದನದ ಹಾಲನ್ನು ರಾತ್ರಿ ವೇಳೆ ಅಂದರೆ ಮಲಗುವ ಮೊದಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲವಾಗುತ್ತದೆ. ಏಕೆಂದರೆ ಕ್ರಿಪ್ಟೋ ಫಯನಾನ್‌ ಎನ್ನುವ ಆಮಿನೋ ಆಸಿಡ್ ಇರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ದೇಸೀ ಗೋವಿನ ತಳಿ ಹಾಗೂ ಇತರ ಗೋತಳಿಗಳನ್ನು ಗಮನಿಸಿದರೆ ಎರಡೂ ತಳಿಗಳಲ್ಲಿ ಹಾಲು ಇದೆ, ಹಾಲಿನ ಉತ್ಪನ್ನಗಳೂ ಲಭ್ಯವಿದೆ. ಆದರೆ ಔಷಧೀಯ ಗುಣಧರ್ಮಗಳಲ್ಲಿ ದೇಸೀ ತಳಿಯ ಹಸುವಿನಲ್ಲಿ ಹೆಚ್ಚಿದೆ. ಏಕೆಂದರೆ ಈ ಹಸುಗಳ ಮೈಕಟ್ಟು ಹಾಗೂ ದೇಹದ ರಚನೆ ಇಲ್ಲಿನ ಮಣ್ಣಿಗೆ, ವಾತಾವರಣಕ್ಕೆ ಹೊಂದಿಕೊಂಡಿರುತ್ತದೆ. ಈ ಗೋವುಗಳು ಬಿಸಿಲಿಗೆ ಮೈಯೊಡ್ಡಿ ಅವುಗಳೆ ಆಹಾರವನ್ನು ತಿಂದು ಬರುವಂತಾಗಬೇಕು. ಆಗ ಮಾತ್ರಾ ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿರುತ್ತದೆ ಎಂದರು. ಮುಂದಿನ ದಿನಗಳಲ್ಲಿ ಈ ತಳಿಯ ಉಳಿವು ಮಾತ್ರವಲ್ಲ ಪ್ರತೀ ಮನೆಯಲ್ಲೂ ದೇಸೀ ತಳಿಯ ದನ ಇರುವ ಹಾಗೆ ಆಗಬೇಕು ಎಂದರು.

ಇದೇ ವೇಳೆ ಮಲೆನಾಡು ಗೊಡ್ಡ ಹಸುವಿನ ಉತ್ಪನ್ನಗಳ ಔಷಧೀಯ ಗುಣಗಳ ಬಗ್ಗೆ ಈಶ್ವರ ನಂಜನಗೂಡು, ಗವ್ಯೋತ್ಪನ್ನ ತಯಾರಿಕೆ ಕುರಿತು ಶ್ರೀಗುರು ಗೋಸೇವಾ ಪರಿವಾರದ ಶ್ರೀಗುರು ಅವರು ಮಾಹಿತಿ ನೀಡಿದರು. (ಆಡಿಯೋ ಮಾಹಿತಿ ಇಲ್ಲಿದೆ..)

ಮುರುಳ್ಯದ ಅಕ್ಷಯ ಆಳ್ವ ಅವರ ಮನೆ ರೇಷ್ಮಾ ನಿಲಯದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಎಪಿ ಸದಾಶಿವ ಮರಿಕೆ, ಶಾಸಕಿ ಭಾಗೀರಥಿ ಮುರುಳ್ಯ, ಕೊಂಕೋಡಿ ಪದ್ಮನಾಭ, ಸಾಜ ರಾಧಾಕೃಷ್ಣ ಆಳ್ವ, ಅಶೋಕ್‌ ನೆಕ್ರಾಜೆ, ಸೀತಾರಾಮ ರೈ ಸವಣೂರು, ಪ್ರಸನ್ನ ಭಟ್‌ ಎಣ್ಮೂರು, ನಿರಂಜನ ಪೋಳ್ಯ, ಚಂದ್ರಶೇಖರ ತಾಳ್ತಜೆ ಮೊದಲಾದವರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಲು....
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

8 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

8 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

11 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

11 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

11 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

11 hours ago