MIRROR FOCUS

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿ ನಡೆಯಿತು.ಗೋತಳಿ ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡ  ಕಾರ್ಯಕ್ರಮ ಇದಾಗಿತ್ತು. ಸಾಕಷ್ಟು ಸಂಖ್ಯೆಯ ಆಸಕ್ತ ಹೈನುಗಾರರು ಭಾಗವಹಿಸಿದ್ದರು.

Advertisement
Advertisement

ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡ ಗೋತಳಿಯ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಹೈನುಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ. ಕೆ ಪಿ ರಮೇಶ್‌, ದೇಸೀ ಗೋತಳಿ ಹಲವು ವಿಶೇಷ ಗುಣಗಳನ್ನು ಹೊಂದಿದೆ. ಅದರಲ್ಲೂ ಮಲೆನಾಡು ಗಿಡ್ಡ ಗೋತಳಿ ಹೆಚ್ಚಿನ ಮಹತ್ವವನ್ನು ಹೊಂದಿದೆ. ದೇಸೀ ತಳಿಯ ದನದ ಹಾಲನ್ನು ರಾತ್ರಿ ವೇಳೆ ಅಂದರೆ ಮಲಗುವ ಮೊದಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲವಾಗುತ್ತದೆ. ಏಕೆಂದರೆ ಕ್ರಿಪ್ಟೋ ಫಯನಾನ್‌ ಎನ್ನುವ ಆಮಿನೋ ಆಸಿಡ್ ಇರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ದೇಸೀ ಗೋವಿನ ತಳಿ ಹಾಗೂ ಇತರ ಗೋತಳಿಗಳನ್ನು ಗಮನಿಸಿದರೆ ಎರಡೂ ತಳಿಗಳಲ್ಲಿ ಹಾಲು ಇದೆ, ಹಾಲಿನ ಉತ್ಪನ್ನಗಳೂ ಲಭ್ಯವಿದೆ. ಆದರೆ ಔಷಧೀಯ ಗುಣಧರ್ಮಗಳಲ್ಲಿ ದೇಸೀ ತಳಿಯ ಹಸುವಿನಲ್ಲಿ ಹೆಚ್ಚಿದೆ. ಏಕೆಂದರೆ ಈ ಹಸುಗಳ ಮೈಕಟ್ಟು ಹಾಗೂ ದೇಹದ ರಚನೆ ಇಲ್ಲಿನ ಮಣ್ಣಿಗೆ, ವಾತಾವರಣಕ್ಕೆ ಹೊಂದಿಕೊಂಡಿರುತ್ತದೆ. ಈ ಗೋವುಗಳು ಬಿಸಿಲಿಗೆ ಮೈಯೊಡ್ಡಿ ಅವುಗಳೆ ಆಹಾರವನ್ನು ತಿಂದು ಬರುವಂತಾಗಬೇಕು. ಆಗ ಮಾತ್ರಾ ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿರುತ್ತದೆ ಎಂದರು. ಮುಂದಿನ ದಿನಗಳಲ್ಲಿ ಈ ತಳಿಯ ಉಳಿವು ಮಾತ್ರವಲ್ಲ ಪ್ರತೀ ಮನೆಯಲ್ಲೂ ದೇಸೀ ತಳಿಯ ದನ ಇರುವ ಹಾಗೆ ಆಗಬೇಕು ಎಂದರು.

ಇದೇ ವೇಳೆ ಮಲೆನಾಡು ಗೊಡ್ಡ ಹಸುವಿನ ಉತ್ಪನ್ನಗಳ ಔಷಧೀಯ ಗುಣಗಳ ಬಗ್ಗೆ ಈಶ್ವರ ನಂಜನಗೂಡು, ಗವ್ಯೋತ್ಪನ್ನ ತಯಾರಿಕೆ ಕುರಿತು ಶ್ರೀಗುರು ಗೋಸೇವಾ ಪರಿವಾರದ ಶ್ರೀಗುರು ಅವರು ಮಾಹಿತಿ ನೀಡಿದರು. (ಆಡಿಯೋ ಮಾಹಿತಿ ಇಲ್ಲಿದೆ..)

Advertisement

ಮುರುಳ್ಯದ ಅಕ್ಷಯ ಆಳ್ವ ಅವರ ಮನೆ ರೇಷ್ಮಾ ನಿಲಯದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಎಪಿ ಸದಾಶಿವ ಮರಿಕೆ, ಶಾಸಕಿ ಭಾಗೀರಥಿ ಮುರುಳ್ಯ, ಕೊಂಕೋಡಿ ಪದ್ಮನಾಭ, ಸಾಜ ರಾಧಾಕೃಷ್ಣ ಆಳ್ವ, ಅಶೋಕ್‌ ನೆಕ್ರಾಜೆ, ಸೀತಾರಾಮ ರೈ ಸವಣೂರು, ಪ್ರಸನ್ನ ಭಟ್‌ ಎಣ್ಮೂರು, ನಿರಂಜನ ಪೋಳ್ಯ, ಚಂದ್ರಶೇಖರ ತಾಳ್ತಜೆ ಮೊದಲಾದವರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಲು....
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 hour ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

3 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

3 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

3 hours ago