Advertisement
MIRROR FOCUS

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

Share

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿ ನಡೆಯಿತು.ಗೋತಳಿ ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡ  ಕಾರ್ಯಕ್ರಮ ಇದಾಗಿತ್ತು. ಸಾಕಷ್ಟು ಸಂಖ್ಯೆಯ ಆಸಕ್ತ ಹೈನುಗಾರರು ಭಾಗವಹಿಸಿದ್ದರು.

Advertisement
Advertisement

ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡ ಗೋತಳಿಯ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಹೈನುಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ. ಕೆ ಪಿ ರಮೇಶ್‌, ದೇಸೀ ಗೋತಳಿ ಹಲವು ವಿಶೇಷ ಗುಣಗಳನ್ನು ಹೊಂದಿದೆ. ಅದರಲ್ಲೂ ಮಲೆನಾಡು ಗಿಡ್ಡ ಗೋತಳಿ ಹೆಚ್ಚಿನ ಮಹತ್ವವನ್ನು ಹೊಂದಿದೆ. ದೇಸೀ ತಳಿಯ ದನದ ಹಾಲನ್ನು ರಾತ್ರಿ ವೇಳೆ ಅಂದರೆ ಮಲಗುವ ಮೊದಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲವಾಗುತ್ತದೆ. ಏಕೆಂದರೆ ಕ್ರಿಪ್ಟೋ ಫಯನಾನ್‌ ಎನ್ನುವ ಆಮಿನೋ ಆಸಿಡ್ ಇರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

Advertisement

ದೇಸೀ ಗೋವಿನ ತಳಿ ಹಾಗೂ ಇತರ ಗೋತಳಿಗಳನ್ನು ಗಮನಿಸಿದರೆ ಎರಡೂ ತಳಿಗಳಲ್ಲಿ ಹಾಲು ಇದೆ, ಹಾಲಿನ ಉತ್ಪನ್ನಗಳೂ ಲಭ್ಯವಿದೆ. ಆದರೆ ಔಷಧೀಯ ಗುಣಧರ್ಮಗಳಲ್ಲಿ ದೇಸೀ ತಳಿಯ ಹಸುವಿನಲ್ಲಿ ಹೆಚ್ಚಿದೆ. ಏಕೆಂದರೆ ಈ ಹಸುಗಳ ಮೈಕಟ್ಟು ಹಾಗೂ ದೇಹದ ರಚನೆ ಇಲ್ಲಿನ ಮಣ್ಣಿಗೆ, ವಾತಾವರಣಕ್ಕೆ ಹೊಂದಿಕೊಂಡಿರುತ್ತದೆ. ಈ ಗೋವುಗಳು ಬಿಸಿಲಿಗೆ ಮೈಯೊಡ್ಡಿ ಅವುಗಳೆ ಆಹಾರವನ್ನು ತಿಂದು ಬರುವಂತಾಗಬೇಕು. ಆಗ ಮಾತ್ರಾ ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿರುತ್ತದೆ ಎಂದರು. ಮುಂದಿನ ದಿನಗಳಲ್ಲಿ ಈ ತಳಿಯ ಉಳಿವು ಮಾತ್ರವಲ್ಲ ಪ್ರತೀ ಮನೆಯಲ್ಲೂ ದೇಸೀ ತಳಿಯ ದನ ಇರುವ ಹಾಗೆ ಆಗಬೇಕು ಎಂದರು.

Advertisement

ಇದೇ ವೇಳೆ ಮಲೆನಾಡು ಗೊಡ್ಡ ಹಸುವಿನ ಉತ್ಪನ್ನಗಳ ಔಷಧೀಯ ಗುಣಗಳ ಬಗ್ಗೆ ಈಶ್ವರ ನಂಜನಗೂಡು, ಗವ್ಯೋತ್ಪನ್ನ ತಯಾರಿಕೆ ಕುರಿತು ಶ್ರೀಗುರು ಗೋಸೇವಾ ಪರಿವಾರದ ಶ್ರೀಗುರು ಅವರು ಮಾಹಿತಿ ನೀಡಿದರು. (ಆಡಿಯೋ ಮಾಹಿತಿ ಇಲ್ಲಿದೆ..)

Advertisement

ಮುರುಳ್ಯದ ಅಕ್ಷಯ ಆಳ್ವ ಅವರ ಮನೆ ರೇಷ್ಮಾ ನಿಲಯದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಎಪಿ ಸದಾಶಿವ ಮರಿಕೆ, ಶಾಸಕಿ ಭಾಗೀರಥಿ ಮುರುಳ್ಯ, ಕೊಂಕೋಡಿ ಪದ್ಮನಾಭ, ಸಾಜ ರಾಧಾಕೃಷ್ಣ ಆಳ್ವ, ಅಶೋಕ್‌ ನೆಕ್ರಾಜೆ, ಸೀತಾರಾಮ ರೈ ಸವಣೂರು, ಪ್ರಸನ್ನ ಭಟ್‌ ಎಣ್ಮೂರು, ನಿರಂಜನ ಪೋಳ್ಯ, ಚಂದ್ರಶೇಖರ ತಾಳ್ತಜೆ ಮೊದಲಾದವರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಲು....
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಟರ್ಕಿ ದೇಶದ ಸಜ್ಜೆ ಬೆಳೆದ ರೈತ | ಪ್ರಯೋಗದಲ್ಲಿ ಯಶಸ್ಸು ಕಂಡ ರೈತ |

ಟರ್ಕಿ ದೇಶದಲ್ಲಿ ಸಜ್ಜೆಯು ಕಡಿಮೆ ಖರ್ಚಿನಲ್ಲಿ ಹೆಚ್ಚು ಆದಾಯ ಬರುವ ಫಸಲುಗಳಲ್ಲಿ ಒಂದಾಗಿದೆ.

8 hours ago

ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ |ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್

ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ…

8 hours ago

ಅಡಿಕೆ ಆಮದು ಚರ್ಚೆಯಾಗುತ್ತಿದ್ದಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪತ್ತೆ | ಅಸ್ಸಾಂ ಗಡಿಯಲ್ಲಿ 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ.…

9 hours ago

ಹವಾಮಾನ ವರದಿ | 28.09.2024 | ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

29.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

16 hours ago

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

1 day ago