Advertisement
MIRROR FOCUS

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

Share

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿ ನಡೆಯಿತು.ಗೋತಳಿ ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡ  ಕಾರ್ಯಕ್ರಮ ಇದಾಗಿತ್ತು. ಸಾಕಷ್ಟು ಸಂಖ್ಯೆಯ ಆಸಕ್ತ ಹೈನುಗಾರರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡ ಗೋತಳಿಯ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಹೈನುಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ. ಕೆ ಪಿ ರಮೇಶ್‌, ದೇಸೀ ಗೋತಳಿ ಹಲವು ವಿಶೇಷ ಗುಣಗಳನ್ನು ಹೊಂದಿದೆ. ಅದರಲ್ಲೂ ಮಲೆನಾಡು ಗಿಡ್ಡ ಗೋತಳಿ ಹೆಚ್ಚಿನ ಮಹತ್ವವನ್ನು ಹೊಂದಿದೆ. ದೇಸೀ ತಳಿಯ ದನದ ಹಾಲನ್ನು ರಾತ್ರಿ ವೇಳೆ ಅಂದರೆ ಮಲಗುವ ಮೊದಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲವಾಗುತ್ತದೆ. ಏಕೆಂದರೆ ಕ್ರಿಪ್ಟೋ ಫಯನಾನ್‌ ಎನ್ನುವ ಆಮಿನೋ ಆಸಿಡ್ ಇರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ದೇಸೀ ಗೋವಿನ ತಳಿ ಹಾಗೂ ಇತರ ಗೋತಳಿಗಳನ್ನು ಗಮನಿಸಿದರೆ ಎರಡೂ ತಳಿಗಳಲ್ಲಿ ಹಾಲು ಇದೆ, ಹಾಲಿನ ಉತ್ಪನ್ನಗಳೂ ಲಭ್ಯವಿದೆ. ಆದರೆ ಔಷಧೀಯ ಗುಣಧರ್ಮಗಳಲ್ಲಿ ದೇಸೀ ತಳಿಯ ಹಸುವಿನಲ್ಲಿ ಹೆಚ್ಚಿದೆ. ಏಕೆಂದರೆ ಈ ಹಸುಗಳ ಮೈಕಟ್ಟು ಹಾಗೂ ದೇಹದ ರಚನೆ ಇಲ್ಲಿನ ಮಣ್ಣಿಗೆ, ವಾತಾವರಣಕ್ಕೆ ಹೊಂದಿಕೊಂಡಿರುತ್ತದೆ. ಈ ಗೋವುಗಳು ಬಿಸಿಲಿಗೆ ಮೈಯೊಡ್ಡಿ ಅವುಗಳೆ ಆಹಾರವನ್ನು ತಿಂದು ಬರುವಂತಾಗಬೇಕು. ಆಗ ಮಾತ್ರಾ ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿರುತ್ತದೆ ಎಂದರು. ಮುಂದಿನ ದಿನಗಳಲ್ಲಿ ಈ ತಳಿಯ ಉಳಿವು ಮಾತ್ರವಲ್ಲ ಪ್ರತೀ ಮನೆಯಲ್ಲೂ ದೇಸೀ ತಳಿಯ ದನ ಇರುವ ಹಾಗೆ ಆಗಬೇಕು ಎಂದರು.

ಇದೇ ವೇಳೆ ಮಲೆನಾಡು ಗೊಡ್ಡ ಹಸುವಿನ ಉತ್ಪನ್ನಗಳ ಔಷಧೀಯ ಗುಣಗಳ ಬಗ್ಗೆ ಈಶ್ವರ ನಂಜನಗೂಡು, ಗವ್ಯೋತ್ಪನ್ನ ತಯಾರಿಕೆ ಕುರಿತು ಶ್ರೀಗುರು ಗೋಸೇವಾ ಪರಿವಾರದ ಶ್ರೀಗುರು ಅವರು ಮಾಹಿತಿ ನೀಡಿದರು. (ಆಡಿಯೋ ಮಾಹಿತಿ ಇಲ್ಲಿದೆ..)

ಮುರುಳ್ಯದ ಅಕ್ಷಯ ಆಳ್ವ ಅವರ ಮನೆ ರೇಷ್ಮಾ ನಿಲಯದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಎಪಿ ಸದಾಶಿವ ಮರಿಕೆ, ಶಾಸಕಿ ಭಾಗೀರಥಿ ಮುರುಳ್ಯ, ಕೊಂಕೋಡಿ ಪದ್ಮನಾಭ, ಸಾಜ ರಾಧಾಕೃಷ್ಣ ಆಳ್ವ, ಅಶೋಕ್‌ ನೆಕ್ರಾಜೆ, ಸೀತಾರಾಮ ರೈ ಸವಣೂರು, ಪ್ರಸನ್ನ ಭಟ್‌ ಎಣ್ಮೂರು, ನಿರಂಜನ ಪೋಳ್ಯ, ಚಂದ್ರಶೇಖರ ತಾಳ್ತಜೆ ಮೊದಲಾದವರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಲು....
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

3 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

16 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

20 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago