Advertisement
MIRROR FOCUS

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

Share

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿ ನಡೆಯಿತು.ಗೋತಳಿ ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡ  ಕಾರ್ಯಕ್ರಮ ಇದಾಗಿತ್ತು. ಸಾಕಷ್ಟು ಸಂಖ್ಯೆಯ ಆಸಕ್ತ ಹೈನುಗಾರರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡ ಗೋತಳಿಯ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಹೈನುಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ. ಕೆ ಪಿ ರಮೇಶ್‌, ದೇಸೀ ಗೋತಳಿ ಹಲವು ವಿಶೇಷ ಗುಣಗಳನ್ನು ಹೊಂದಿದೆ. ಅದರಲ್ಲೂ ಮಲೆನಾಡು ಗಿಡ್ಡ ಗೋತಳಿ ಹೆಚ್ಚಿನ ಮಹತ್ವವನ್ನು ಹೊಂದಿದೆ. ದೇಸೀ ತಳಿಯ ದನದ ಹಾಲನ್ನು ರಾತ್ರಿ ವೇಳೆ ಅಂದರೆ ಮಲಗುವ ಮೊದಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲವಾಗುತ್ತದೆ. ಏಕೆಂದರೆ ಕ್ರಿಪ್ಟೋ ಫಯನಾನ್‌ ಎನ್ನುವ ಆಮಿನೋ ಆಸಿಡ್ ಇರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ದೇಸೀ ಗೋವಿನ ತಳಿ ಹಾಗೂ ಇತರ ಗೋತಳಿಗಳನ್ನು ಗಮನಿಸಿದರೆ ಎರಡೂ ತಳಿಗಳಲ್ಲಿ ಹಾಲು ಇದೆ, ಹಾಲಿನ ಉತ್ಪನ್ನಗಳೂ ಲಭ್ಯವಿದೆ. ಆದರೆ ಔಷಧೀಯ ಗುಣಧರ್ಮಗಳಲ್ಲಿ ದೇಸೀ ತಳಿಯ ಹಸುವಿನಲ್ಲಿ ಹೆಚ್ಚಿದೆ. ಏಕೆಂದರೆ ಈ ಹಸುಗಳ ಮೈಕಟ್ಟು ಹಾಗೂ ದೇಹದ ರಚನೆ ಇಲ್ಲಿನ ಮಣ್ಣಿಗೆ, ವಾತಾವರಣಕ್ಕೆ ಹೊಂದಿಕೊಂಡಿರುತ್ತದೆ. ಈ ಗೋವುಗಳು ಬಿಸಿಲಿಗೆ ಮೈಯೊಡ್ಡಿ ಅವುಗಳೆ ಆಹಾರವನ್ನು ತಿಂದು ಬರುವಂತಾಗಬೇಕು. ಆಗ ಮಾತ್ರಾ ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿರುತ್ತದೆ ಎಂದರು. ಮುಂದಿನ ದಿನಗಳಲ್ಲಿ ಈ ತಳಿಯ ಉಳಿವು ಮಾತ್ರವಲ್ಲ ಪ್ರತೀ ಮನೆಯಲ್ಲೂ ದೇಸೀ ತಳಿಯ ದನ ಇರುವ ಹಾಗೆ ಆಗಬೇಕು ಎಂದರು.

ಇದೇ ವೇಳೆ ಮಲೆನಾಡು ಗೊಡ್ಡ ಹಸುವಿನ ಉತ್ಪನ್ನಗಳ ಔಷಧೀಯ ಗುಣಗಳ ಬಗ್ಗೆ ಈಶ್ವರ ನಂಜನಗೂಡು, ಗವ್ಯೋತ್ಪನ್ನ ತಯಾರಿಕೆ ಕುರಿತು ಶ್ರೀಗುರು ಗೋಸೇವಾ ಪರಿವಾರದ ಶ್ರೀಗುರು ಅವರು ಮಾಹಿತಿ ನೀಡಿದರು. (ಆಡಿಯೋ ಮಾಹಿತಿ ಇಲ್ಲಿದೆ..)

ಮುರುಳ್ಯದ ಅಕ್ಷಯ ಆಳ್ವ ಅವರ ಮನೆ ರೇಷ್ಮಾ ನಿಲಯದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಎಪಿ ಸದಾಶಿವ ಮರಿಕೆ, ಶಾಸಕಿ ಭಾಗೀರಥಿ ಮುರುಳ್ಯ, ಕೊಂಕೋಡಿ ಪದ್ಮನಾಭ, ಸಾಜ ರಾಧಾಕೃಷ್ಣ ಆಳ್ವ, ಅಶೋಕ್‌ ನೆಕ್ರಾಜೆ, ಸೀತಾರಾಮ ರೈ ಸವಣೂರು, ಪ್ರಸನ್ನ ಭಟ್‌ ಎಣ್ಮೂರು, ನಿರಂಜನ ಪೋಳ್ಯ, ಚಂದ್ರಶೇಖರ ತಾಳ್ತಜೆ ಮೊದಲಾದವರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಲು....
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

15 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

15 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago