Advertisement
MIRROR FOCUS

ರಾತ್ರಿ ದೇಸೀ ತಳಿ ದನದ ಹಾಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲ | ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನ ಕಾರ್ಯಕ್ರಮದಲ್ಲಿ ಡಾ.ಕೆ ಪಿ ರಮೇಶ್‌ |

Share

ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದಲ್ಲಿ ನಡೆಯಿತು.ಗೋತಳಿ ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಂಡ  ಕಾರ್ಯಕ್ರಮ ಇದಾಗಿತ್ತು. ಸಾಕಷ್ಟು ಸಂಖ್ಯೆಯ ಆಸಕ್ತ ಹೈನುಗಾರರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಲೆನಾಡು ಗಿಡ್ಡ ಗೋತಳಿಯ ಬಗ್ಗೆ ಮಾಹಿತಿ ನೀಡಿದ ರಾಷ್ಟ್ರೀಯ ಹೈನುಸಂಶೋಧನಾ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ. ಕೆ ಪಿ ರಮೇಶ್‌, ದೇಸೀ ಗೋತಳಿ ಹಲವು ವಿಶೇಷ ಗುಣಗಳನ್ನು ಹೊಂದಿದೆ. ಅದರಲ್ಲೂ ಮಲೆನಾಡು ಗಿಡ್ಡ ಗೋತಳಿ ಹೆಚ್ಚಿನ ಮಹತ್ವವನ್ನು ಹೊಂದಿದೆ. ದೇಸೀ ತಳಿಯ ದನದ ಹಾಲನ್ನು ರಾತ್ರಿ ವೇಳೆ ಅಂದರೆ ಮಲಗುವ ಮೊದಲು ಕುಡಿದರೆ ಶಾಂತ ಚಿತ್ತದಿಂದ ನಿದ್ರೆ ಮಾಡಲು ಅನುಕೂಲವಾಗುತ್ತದೆ. ಏಕೆಂದರೆ ಕ್ರಿಪ್ಟೋ ಫಯನಾನ್‌ ಎನ್ನುವ ಆಮಿನೋ ಆಸಿಡ್ ಇರುವುದರಿಂದ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.

ದೇಸೀ ಗೋವಿನ ತಳಿ ಹಾಗೂ ಇತರ ಗೋತಳಿಗಳನ್ನು ಗಮನಿಸಿದರೆ ಎರಡೂ ತಳಿಗಳಲ್ಲಿ ಹಾಲು ಇದೆ, ಹಾಲಿನ ಉತ್ಪನ್ನಗಳೂ ಲಭ್ಯವಿದೆ. ಆದರೆ ಔಷಧೀಯ ಗುಣಧರ್ಮಗಳಲ್ಲಿ ದೇಸೀ ತಳಿಯ ಹಸುವಿನಲ್ಲಿ ಹೆಚ್ಚಿದೆ. ಏಕೆಂದರೆ ಈ ಹಸುಗಳ ಮೈಕಟ್ಟು ಹಾಗೂ ದೇಹದ ರಚನೆ ಇಲ್ಲಿನ ಮಣ್ಣಿಗೆ, ವಾತಾವರಣಕ್ಕೆ ಹೊಂದಿಕೊಂಡಿರುತ್ತದೆ. ಈ ಗೋವುಗಳು ಬಿಸಿಲಿಗೆ ಮೈಯೊಡ್ಡಿ ಅವುಗಳೆ ಆಹಾರವನ್ನು ತಿಂದು ಬರುವಂತಾಗಬೇಕು. ಆಗ ಮಾತ್ರಾ ಹೆಚ್ಚಿನ ಔಷಧೀಯ ಗುಣಗಳನ್ನು ಹೊಂದಿರುತ್ತದೆ ಎಂದರು. ಮುಂದಿನ ದಿನಗಳಲ್ಲಿ ಈ ತಳಿಯ ಉಳಿವು ಮಾತ್ರವಲ್ಲ ಪ್ರತೀ ಮನೆಯಲ್ಲೂ ದೇಸೀ ತಳಿಯ ದನ ಇರುವ ಹಾಗೆ ಆಗಬೇಕು ಎಂದರು.

ಇದೇ ವೇಳೆ ಮಲೆನಾಡು ಗೊಡ್ಡ ಹಸುವಿನ ಉತ್ಪನ್ನಗಳ ಔಷಧೀಯ ಗುಣಗಳ ಬಗ್ಗೆ ಈಶ್ವರ ನಂಜನಗೂಡು, ಗವ್ಯೋತ್ಪನ್ನ ತಯಾರಿಕೆ ಕುರಿತು ಶ್ರೀಗುರು ಗೋಸೇವಾ ಪರಿವಾರದ ಶ್ರೀಗುರು ಅವರು ಮಾಹಿತಿ ನೀಡಿದರು. (ಆಡಿಯೋ ಮಾಹಿತಿ ಇಲ್ಲಿದೆ..)

ಮುರುಳ್ಯದ ಅಕ್ಷಯ ಆಳ್ವ ಅವರ ಮನೆ ರೇಷ್ಮಾ ನಿಲಯದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಕಾರ್ಯಕ್ರಮದಲ್ಲಿ ಸಾವಯವ ಕೃಷಿಕ ಎಪಿ ಸದಾಶಿವ ಮರಿಕೆ, ಶಾಸಕಿ ಭಾಗೀರಥಿ ಮುರುಳ್ಯ, ಕೊಂಕೋಡಿ ಪದ್ಮನಾಭ, ಸಾಜ ರಾಧಾಕೃಷ್ಣ ಆಳ್ವ, ಅಶೋಕ್‌ ನೆಕ್ರಾಜೆ, ಸೀತಾರಾಮ ರೈ ಸವಣೂರು, ಪ್ರಸನ್ನ ಭಟ್‌ ಎಣ್ಮೂರು, ನಿರಂಜನ ಪೋಳ್ಯ, ಚಂದ್ರಶೇಖರ ತಾಳ್ತಜೆ ಮೊದಲಾದವರು ಭಾಗವಹಿಸಿದ್ದರು.

ಪ್ರತಿಕ್ರಿಯಿಸಲು....
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

14 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

17 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

17 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

21 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

21 hours ago