MIRROR FOCUS

ರೈತರು ಸ್ವಾವಲಂಬಿ ಬದುಕು | ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರೀಯ ಜೇನು ಮಂಡಳಿ  ಹಾಗೂ  ತೋಟಗಾರಿಕಾ ಇಲಾಖೆ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ  ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ ನಡೆಯಿತು.………ಮುಂದೆ ಓದಿ……..

Advertisement

ಕಾರ್ಯಾಗಾರಕ್ಕೆ ಚಾಲನೆ ನೀಡಿದ ಶಾಸಕ   ಶಿವರಾಮ್ ಹೆಬ್ಬಾರ್, ವೈಜ್ಞಾನಿಕ ಪದ್ಧತಿಯಲ್ಲಿ ಅಡಿಕೆಯಂತಹ ಬೆಳೆಯನ್ನು ಎಲ್ಲೆಡೆಯೂ ಬೆಳೆಯಲಾಗುತ್ತಿದೆ .ರೈತರು ಸುಲಭ ಬೆಳೆಗೆ ಮಾರು ಹೋಗಿದ್ದಾರೆ. ಆರ್ಥಿಕವಾಗಿ ಗಟ್ಟಿಯಾಗುವ ಬೆಳೆಗಳನ್ನು ಅಳವಡಿಸಿಕೊಂಡಿಲ್ಲ .ರೈತರು ತಮ್ಮ ಕೃಷಿಯಲ್ಲಿ ಜೇನಿನ ಪರ್ಯಾಯ ಬೆಳೆಯನ್ನು ಬೆಳೆದು ಆರ್ಥಿಕವಾಗಿ  ಲಾಭ  ಮಾಡಿಕೊಳ್ಳಬೇಕಿದೆ.  ಇಂತಹ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ  ಸ್ವಾವಲಂಬಿ ಬದುಕು  ಕಟ್ಟಿಕೊಳ್ಳಬೇಕಾಗಿದೆ ಎಂದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಿ.ಪಿ. ಸತೀಶ್ ಜೇನು ಸಾಕಣೆ ಕುರಿತಂತೆ  ಮಾಹಿತಿ ನೀಡಿ, ಪರಕೀಯ ಪರಾಗ ಸ್ಪರ್ಶ ಆಗುವ ಬೆಳೆಗಳಲ್ಲಿ ಶೇಕಡ 70ರಷ್ಟು  ಪರಾಗಸ್ಪರ್ಶ ಜೇನಿನಿಂದಲೇ  ಆಗಲಿದೆ.  ಪರಾಗ ಸ್ಪರ್ಶದಿಂದಾಗುವ ಕೊರತೆಯಿಂದ  ಸುಮಾರು 6 ಸಾವಿರ ಕೋಟಿ ರೂಪಾಯಿಯಷ್ಟು ಬೆಳೆ  ಹಾನಿಯಾಗುತ್ತಿದ್ದು ,  ಅದನ್ನು ತಡೆಯುವಲ್ಲಿ ಜೇನು  ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿ  ಡಾ. ಕೆ.ಟಿ. ವಿಜಯ ಕುಮಾರ್, ಜೇನು ಕೃಷಿ ಮಾಡುವ ಸಮಯದಲ್ಲಿ ಜೇನು ಮತ್ತು ಅವುಗಳ ಜೀವನ ಕ್ರಮದ ಬಗ್ಗೆ  ತಿಳಿದುಕೊಂಡರೆ ಜೇನು ಕೃಷಿ ಸುಲಭವಾಗಲಿದೆ. ಜೇನಿನಲ್ಲಿಯೂ ಬೇರೆ ಬೇರೆ ಪ್ರಬೇಧಗಳಿವೆ. ಅದರ ಬಗ್ಗೆಯೂ ತಿಳಿದುಕೊಂಡು ವಾತಾವರಣಕ್ಕೆ ತಕ್ಕಂತೆ  ಕೃಷಿ  ಮಾಡಬೇಕಾಗಿದೆ ಎಂದು ಹೇಳಿದರು.

ಐದಾರು ವರ್ಷಗಳಿಂದ ತೋಟಗಾರಿಕಾ ಇಲಾಖೆಯ ಸಹಾಯ ಧನದಲ್ಲಿ ಜೇನು ಸಾಕಣೆ ಮಾಡುತ್ತಿದ್ದು, ಇದರಿಂದ ಆರ್ಥಿಕವಾಗಿ ಲಾಭವಾಗಿದೆ.  ಜೇನು ಸಾಕಣಿಕೆಗೆ ಸರ್ಕಾರ ಇನ್ನಷ್ಟು ಪ್ರೋತ್ಸಾಹ ನೀಡಬೇಕು ಎಂದು ಕೃಷಿಕ  ತಿಮ್ಮಣ್ಣ ಭಟ್ ಹೇಳಿದರು. ಕಳೆದ ಸಾಲಿನಲ್ಲಿ ತೋಟಗಾರಿಕಾ ಇಲಾಖೆ ವತಿಯಿಂದ  10 ಜೇನು ಪೆಟ್ಟಿಗೆಗಳನ್ನು ಪಡೆದು ಅದರಿಂದ  ಲಾಭ  ಮಾಡಿಕೊಳ್ಳಲಾಗಿದೆ. ಸರ್ಕಾರದ ಇಂತಹ ಯೋಜನೆಗಳು ಜೇನು ಕೃಷಿಕರಿಗೆ ಅನುಕೂಲವಾಗಲಿದೆ ಎಂದು ಕೃಷಿಕ ಎನ್. ಐ. ಕುಮಾರ್ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

2 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವಿಧಾತ್ರಿ ಎಂ, ಮೈಸೂರು

ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್‌ಟೌನ್ ಶಾಲೆ, ಮೈಸೂರು | …

3 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನೈನಿಕಾ ಬಿ ಸಿ

ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…

3 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ನಯೋನಿಕಾ.ಬಿ.ಸಿ.

ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್‌ ಆನ್ಸ್‌ ಶಾಲೆ ಕಡಬ | -…

4 hours ago

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ

ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…

5 hours ago

ಶಕ್ತಿ ವಸತಿ ಶಾಲೆಯಲ್ಲಿ ಗುರು ಪೂರ್ಣಿಮೆ | ದೇವರು ಹಾಗೂ ಗುರು ಇಬ್ಬರೂ ಪೂಜೆಗೆ ಯೋಗ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…

6 hours ago