MIRROR FOCUS

ರೈತರು ಸ್ವಾವಲಂಬಿ ಬದುಕು | ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಷ್ಟ್ರೀಯ ಜೇನು ಮಂಡಳಿ  ಹಾಗೂ  ತೋಟಗಾರಿಕಾ ಇಲಾಖೆ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ  ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ ನಡೆಯಿತು.………ಮುಂದೆ ಓದಿ……..

Advertisement

ಕಾರ್ಯಾಗಾರಕ್ಕೆ ಚಾಲನೆ ನೀಡಿದ ಶಾಸಕ   ಶಿವರಾಮ್ ಹೆಬ್ಬಾರ್, ವೈಜ್ಞಾನಿಕ ಪದ್ಧತಿಯಲ್ಲಿ ಅಡಿಕೆಯಂತಹ ಬೆಳೆಯನ್ನು ಎಲ್ಲೆಡೆಯೂ ಬೆಳೆಯಲಾಗುತ್ತಿದೆ .ರೈತರು ಸುಲಭ ಬೆಳೆಗೆ ಮಾರು ಹೋಗಿದ್ದಾರೆ. ಆರ್ಥಿಕವಾಗಿ ಗಟ್ಟಿಯಾಗುವ ಬೆಳೆಗಳನ್ನು ಅಳವಡಿಸಿಕೊಂಡಿಲ್ಲ .ರೈತರು ತಮ್ಮ ಕೃಷಿಯಲ್ಲಿ ಜೇನಿನ ಪರ್ಯಾಯ ಬೆಳೆಯನ್ನು ಬೆಳೆದು ಆರ್ಥಿಕವಾಗಿ  ಲಾಭ  ಮಾಡಿಕೊಳ್ಳಬೇಕಿದೆ.  ಇಂತಹ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ  ಸ್ವಾವಲಂಬಿ ಬದುಕು  ಕಟ್ಟಿಕೊಳ್ಳಬೇಕಾಗಿದೆ ಎಂದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಿ.ಪಿ. ಸತೀಶ್ ಜೇನು ಸಾಕಣೆ ಕುರಿತಂತೆ  ಮಾಹಿತಿ ನೀಡಿ, ಪರಕೀಯ ಪರಾಗ ಸ್ಪರ್ಶ ಆಗುವ ಬೆಳೆಗಳಲ್ಲಿ ಶೇಕಡ 70ರಷ್ಟು  ಪರಾಗಸ್ಪರ್ಶ ಜೇನಿನಿಂದಲೇ  ಆಗಲಿದೆ.  ಪರಾಗ ಸ್ಪರ್ಶದಿಂದಾಗುವ ಕೊರತೆಯಿಂದ  ಸುಮಾರು 6 ಸಾವಿರ ಕೋಟಿ ರೂಪಾಯಿಯಷ್ಟು ಬೆಳೆ  ಹಾನಿಯಾಗುತ್ತಿದ್ದು ,  ಅದನ್ನು ತಡೆಯುವಲ್ಲಿ ಜೇನು  ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿ  ಡಾ. ಕೆ.ಟಿ. ವಿಜಯ ಕುಮಾರ್, ಜೇನು ಕೃಷಿ ಮಾಡುವ ಸಮಯದಲ್ಲಿ ಜೇನು ಮತ್ತು ಅವುಗಳ ಜೀವನ ಕ್ರಮದ ಬಗ್ಗೆ  ತಿಳಿದುಕೊಂಡರೆ ಜೇನು ಕೃಷಿ ಸುಲಭವಾಗಲಿದೆ. ಜೇನಿನಲ್ಲಿಯೂ ಬೇರೆ ಬೇರೆ ಪ್ರಬೇಧಗಳಿವೆ. ಅದರ ಬಗ್ಗೆಯೂ ತಿಳಿದುಕೊಂಡು ವಾತಾವರಣಕ್ಕೆ ತಕ್ಕಂತೆ  ಕೃಷಿ  ಮಾಡಬೇಕಾಗಿದೆ ಎಂದು ಹೇಳಿದರು.

ಐದಾರು ವರ್ಷಗಳಿಂದ ತೋಟಗಾರಿಕಾ ಇಲಾಖೆಯ ಸಹಾಯ ಧನದಲ್ಲಿ ಜೇನು ಸಾಕಣೆ ಮಾಡುತ್ತಿದ್ದು, ಇದರಿಂದ ಆರ್ಥಿಕವಾಗಿ ಲಾಭವಾಗಿದೆ.  ಜೇನು ಸಾಕಣಿಕೆಗೆ ಸರ್ಕಾರ ಇನ್ನಷ್ಟು ಪ್ರೋತ್ಸಾಹ ನೀಡಬೇಕು ಎಂದು ಕೃಷಿಕ  ತಿಮ್ಮಣ್ಣ ಭಟ್ ಹೇಳಿದರು. ಕಳೆದ ಸಾಲಿನಲ್ಲಿ ತೋಟಗಾರಿಕಾ ಇಲಾಖೆ ವತಿಯಿಂದ  10 ಜೇನು ಪೆಟ್ಟಿಗೆಗಳನ್ನು ಪಡೆದು ಅದರಿಂದ  ಲಾಭ  ಮಾಡಿಕೊಳ್ಳಲಾಗಿದೆ. ಸರ್ಕಾರದ ಇಂತಹ ಯೋಜನೆಗಳು ಜೇನು ಕೃಷಿಕರಿಗೆ ಅನುಕೂಲವಾಗಲಿದೆ ಎಂದು ಕೃಷಿಕ ಎನ್. ಐ. ಕುಮಾರ್ ಹೇಳುತ್ತಾರೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ಪಾತ್ರೆಗೆ ಕ್ಷಯವಿಲ್ಲ!

ಬರಿದಾಗದು, ಜ್ಞಾನದ ಅಕ್ಷಯ ಪಾತ್ರೆ. ಬದುಕಿನ ಕೊನೆಯ ವರೆಗೂ ಜತೆಯಲ್ಲಿರುವುದು ಜ್ಞಾನ ಮಾತ್ರ.…

6 hours ago

ಕ್ಯಾಂಪ್ಕೊ ಬ್ರ್ಯಾಂಡ್ ಅಡಿಕೆ ಅಂತರಾಷ್ಟ್ರೀಯ ಮಟ್ಟಕ್ಕೆ

ಅಡಿಕೆಯ ಗುಣಮಟ್ಟದ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ "ಕ್ಯಾಂಪ್ಕೋ ಬ್ರಾಂಡ್‌ ಅಡಿಕೆ" ಗೆ ಪ್ರತ್ಯೇಕವಾದ…

14 hours ago

ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ರಕ್ಷಿತಾರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವು ಕುರಿತು ಮುಖ್ಯಮಂತ್ರಿ ಹಾಗೂ…

1 day ago

ಬೇಸಿಗೆ ಹಿನ್ನೆಲೆ | ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಬಿಡುಗಡೆ ಕುರಿತು ಚರ್ಚೆ

ರಾಜ್ಯದಲ್ಲಿ ಬಿರು ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ರಾಜ್ಯದ ಜಲಾಶಯಗಳಿಂದ ನೀರು…

1 day ago

ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್

ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ  ವಿಶೇಷ ಡಿಪ್ ಕಾಫಿ ಬ್ಯಾಗ್…

1 day ago

ರಸಗೊಬ್ಬರಗಳ ಬೆಲೆ ಸ್ಥಿರವಾಗಿರಿಸಲು ಕ್ರಮ | 45 ಕೆ.ಜಿ. ಯೂರಿಯಾ ಬೆಲೆ 242 ರೂ.ಗೆ ನಿಗದಿ

ದೇಶದಲ್ಲಿ  ರಸಗೊಬ್ಬರಗಳ ಬೆಲೆ ಇಳಿಕೆ   ಕುರಿತಂತೆ  ಸದಸ್ಯರು ಕೇಳಿದ ಪ್ರಶ್ನೆಗೆ  ಉತ್ತರಿಸಿದ ಕೇಂದ್ರ…

1 day ago