Advertisement
MIRROR FOCUS

ರೈತರು ಸ್ವಾವಲಂಬಿ ಬದುಕು | ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ |

Share

ರಾಷ್ಟ್ರೀಯ ಜೇನು ಮಂಡಳಿ  ಹಾಗೂ  ತೋಟಗಾರಿಕಾ ಇಲಾಖೆ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ  ವೈಜ್ಞಾನಿಕ ಜೇನು ಬೇಸಾಯ ಕುರಿತ ಕಾರ್ಯಾಗಾರ ನಡೆಯಿತು.………ಮುಂದೆ ಓದಿ……..

ಕಾರ್ಯಾಗಾರಕ್ಕೆ ಚಾಲನೆ ನೀಡಿದ ಶಾಸಕ   ಶಿವರಾಮ್ ಹೆಬ್ಬಾರ್, ವೈಜ್ಞಾನಿಕ ಪದ್ಧತಿಯಲ್ಲಿ ಅಡಿಕೆಯಂತಹ ಬೆಳೆಯನ್ನು ಎಲ್ಲೆಡೆಯೂ ಬೆಳೆಯಲಾಗುತ್ತಿದೆ .ರೈತರು ಸುಲಭ ಬೆಳೆಗೆ ಮಾರು ಹೋಗಿದ್ದಾರೆ. ಆರ್ಥಿಕವಾಗಿ ಗಟ್ಟಿಯಾಗುವ ಬೆಳೆಗಳನ್ನು ಅಳವಡಿಸಿಕೊಂಡಿಲ್ಲ .ರೈತರು ತಮ್ಮ ಕೃಷಿಯಲ್ಲಿ ಜೇನಿನ ಪರ್ಯಾಯ ಬೆಳೆಯನ್ನು ಬೆಳೆದು ಆರ್ಥಿಕವಾಗಿ  ಲಾಭ  ಮಾಡಿಕೊಳ್ಳಬೇಕಿದೆ.  ಇಂತಹ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ  ಸ್ವಾವಲಂಬಿ ಬದುಕು  ಕಟ್ಟಿಕೊಳ್ಳಬೇಕಾಗಿದೆ ಎಂದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಿ.ಪಿ. ಸತೀಶ್ ಜೇನು ಸಾಕಣೆ ಕುರಿತಂತೆ  ಮಾಹಿತಿ ನೀಡಿ, ಪರಕೀಯ ಪರಾಗ ಸ್ಪರ್ಶ ಆಗುವ ಬೆಳೆಗಳಲ್ಲಿ ಶೇಕಡ 70ರಷ್ಟು  ಪರಾಗಸ್ಪರ್ಶ ಜೇನಿನಿಂದಲೇ  ಆಗಲಿದೆ.  ಪರಾಗ ಸ್ಪರ್ಶದಿಂದಾಗುವ ಕೊರತೆಯಿಂದ  ಸುಮಾರು 6 ಸಾವಿರ ಕೋಟಿ ರೂಪಾಯಿಯಷ್ಟು ಬೆಳೆ  ಹಾನಿಯಾಗುತ್ತಿದ್ದು ,  ಅದನ್ನು ತಡೆಯುವಲ್ಲಿ ಜೇನು  ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿ  ಡಾ. ಕೆ.ಟಿ. ವಿಜಯ ಕುಮಾರ್, ಜೇನು ಕೃಷಿ ಮಾಡುವ ಸಮಯದಲ್ಲಿ ಜೇನು ಮತ್ತು ಅವುಗಳ ಜೀವನ ಕ್ರಮದ ಬಗ್ಗೆ  ತಿಳಿದುಕೊಂಡರೆ ಜೇನು ಕೃಷಿ ಸುಲಭವಾಗಲಿದೆ. ಜೇನಿನಲ್ಲಿಯೂ ಬೇರೆ ಬೇರೆ ಪ್ರಬೇಧಗಳಿವೆ. ಅದರ ಬಗ್ಗೆಯೂ ತಿಳಿದುಕೊಂಡು ವಾತಾವರಣಕ್ಕೆ ತಕ್ಕಂತೆ  ಕೃಷಿ  ಮಾಡಬೇಕಾಗಿದೆ ಎಂದು ಹೇಳಿದರು.

ಐದಾರು ವರ್ಷಗಳಿಂದ ತೋಟಗಾರಿಕಾ ಇಲಾಖೆಯ ಸಹಾಯ ಧನದಲ್ಲಿ ಜೇನು ಸಾಕಣೆ ಮಾಡುತ್ತಿದ್ದು, ಇದರಿಂದ ಆರ್ಥಿಕವಾಗಿ ಲಾಭವಾಗಿದೆ.  ಜೇನು ಸಾಕಣಿಕೆಗೆ ಸರ್ಕಾರ ಇನ್ನಷ್ಟು ಪ್ರೋತ್ಸಾಹ ನೀಡಬೇಕು ಎಂದು ಕೃಷಿಕ  ತಿಮ್ಮಣ್ಣ ಭಟ್ ಹೇಳಿದರು. ಕಳೆದ ಸಾಲಿನಲ್ಲಿ ತೋಟಗಾರಿಕಾ ಇಲಾಖೆ ವತಿಯಿಂದ  10 ಜೇನು ಪೆಟ್ಟಿಗೆಗಳನ್ನು ಪಡೆದು ಅದರಿಂದ  ಲಾಭ  ಮಾಡಿಕೊಳ್ಳಲಾಗಿದೆ. ಸರ್ಕಾರದ ಇಂತಹ ಯೋಜನೆಗಳು ಜೇನು ಕೃಷಿಕರಿಗೆ ಅನುಕೂಲವಾಗಲಿದೆ ಎಂದು ಕೃಷಿಕ ಎನ್. ಐ. ಕುಮಾರ್ ಹೇಳುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

1 hour ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

11 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

11 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

11 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

11 hours ago