ಸುದ್ದಿಗಳು

ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮ | ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲ ಅನುಮೋದಿಸಿದ ವಿಶ್ವಬ್ಯಾಂಕ್..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಶ್ವಬ್ಯಾಂಕ್‌ನ ಕಾರ್ಯನಿರ್ವಾಹಕ ಮಂಡಳಿಯು ಕರ್ನಾಟಕಕ್ಕೆ 363 ಮಿಲಿಯನ್ ಡಾಲರ್ ಸಾಲವನ್ನು ಅನುಮೋದಿಸಿದೆ. ಇದರಿಂದ ರಾಜ್ಯದ ಎರಡು ಮಿಲಿಯನ್ ಗ್ರಾಮೀಣ ಕುಟುಂಬಗಳಿಗೆ ಕೊಳವೆ ನೀರಿನ ಸಂಪರ್ಕದ ಮೂಲಕ ಅವರ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗಲಿದೆ.

Advertisement

ಸುಮಾರು 77 ಪ್ರತಿಶತದಷ್ಟು ಕರ್ನಾಟಕವು ಶುಷ್ಕ ಅಥವಾ ಅರೆ ಶುಷ್ಕವಾಗಿದ್ದು, ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಅಸ್ಥಿರ ಮಳೆಯಿಂದಾಗಿ ಬರ ಮತ್ತು ಪ್ರವಾಹಗಳಿಗೆ ಗುರಿಯಾಗುತ್ತದೆ. ಅಂತರ್ಜಲ ಕುಸಿತ ಮತ್ತು ನೀರಿನ ಗುಣಮಟ್ಟ ಕ್ಷೀಣಿಸಲು ಕಾರಣವಾಗುತ್ತದೆ ಎಂದು ವಿಶ್ವ ಬ್ಯಾಂಕ್ ಹೇಳಿಕೆ ಬುಧವಾರ ತಿಳಿಸಿದೆ.

‘ಹೀಗಾಗಿ, ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಸರಬರಾಜು ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯನ್ನು ಬೆಂಬಲಿಸುತ್ತದೆ. ಈ ಕಾರ್ಯಕ್ರಮವು ರಾಜ್ಯದ ಪ್ರತಿ ಗ್ರಾಮೀಣ ಮನೆಗಳಿಗೆ ಟ್ಯಾಪ್ ನೀರಿನ ಸಂಪರ್ಕವನ್ನು ನೀಡುತ್ತದೆ’ ಎಂದು ಅದು ಹೇಳಿದೆ.

ಇದು ಕುಡಿಯುವ ನೀರಿನ ವಿತರಣಾ ಜಾಲದ ನಿರ್ಮಾಣ ಮತ್ತು ಗ್ರಾಮೀಣ ಮನೆಗಳಲ್ಲಿ ನೀರಿನ ಮೀಟರ್‌ಗಳನ್ನು ಅಳವಡಿಸುವುದನ್ನು ಒಳಗೊಂಡಿರುತ್ತದೆ. ಅಲ್ಲದೆ, ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಸುಮಾರು 10 ಮಿಲಿಯನ್ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದಿದೆ.

ಲಿಂಗ ಸಮಾನತೆಯು ಜಾಗತಿಕವಾಗಿ ಒಂದು ಪ್ರಮುಖ ವಿಷಯವಾಗಿದೆ. ಎಲ್ಲಾ ಗ್ರಾಮೀಣ ಮನೆಗಳಿಗೆ ಕೊಳವೆ ನೀರನ್ನು ಒದಗಿಸುವ ಭಾರತದ ಪ್ರಯತ್ನಗಳನ್ನು ಬೆಂಬಲಿಸಲು ವಿಶ್ವಬ್ಯಾಂಕ್‌ನ ಬದ್ಧತೆಯು ಈ ಸಮಸ್ಯೆಯನ್ನು ಪರಿಹರಿಸುವ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುವ ಪ್ರಮುಖ ಹೆಜ್ಜೆಯಾಗಿದೆ ಎಂದು ವಿಶ್ವಬ್ಯಾಂಕ್‌ನ ಭಾರತ ದೇಶದ ನಿರ್ದೇಶಕ ಆಗಸ್ಟೆ ತಾನೋ ಕೌಮೆ ಹೇಳಿದರು.

ಮುಖ್ಯವಾಗಿ ಈ ಕಾರ್ಯಕ್ರಮವು ನೀರು ಸರಬರಾಜು ಸೇವೆಗಳನ್ನು ಸಮರ್ಥವಾಗಿ ನಿರ್ವಹಿಸುವ ಗ್ರಾಮೀಣ ಸ್ಥಳೀಯ ಸರ್ಕಾರಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಶುದ್ಧ ನೀರಿನಂತಹ ಮೂಲಭೂತ ಸೇವೆಗಳ ಪ್ರವೇಶವು ಮಹಿಳೆಯರ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ. ಏಕೆಂದರೆ, ಅವರು ನೀರನ್ನು ತರುವ ದೊಡ್ಡ ಹೊರೆಯನ್ನು ಹೊಂದಿರುತ್ತಾರೆ. ಅವರೀಗ ಉತ್ತಮ ಆರೋಗ್ಯವನ್ನು ಹೊಂದಬಹುದು. ಶಿಕ್ಷಣ ಮತ್ತು ಔಪಚಾರಿಕ ಉದ್ಯೋಗಗಳಿಗೆ ಅವಕಾಶಗಳನ್ನು ಮುಂದುವರಿಸಲು ಹೆಚ್ಚಿನ ಸಮಯ ಸಿಗುತ್ತದೆ ಎಂದು ತಿಳಿಸಿದರು.

ಕರ್ನಾಟಕ ಕಳೆದ ದಶಕಗಳಲ್ಲಿ ಗ್ರಾಮೀಣ ನೀರು ಪೂರೈಕೆಯಲ್ಲಿ ಪ್ರಗತಿ ಸಾಧಿಸಿದ್ದರೂ, ಸ್ಥಳೀಯ ಮತ್ತು ಗ್ರಾಮ ಮಟ್ಟದಲ್ಲಿ ಅಸಮರ್ಪಕ ಸಾಮರ್ಥ್ಯವು ಹಿನ್ನಡೆಗೆ ಕಾರಣವಾಗಿದೆ. ಇದನ್ನು ಪರಿಹರಿಸಲು, ಗ್ರಾಮೀಣ ನೀರು ಸರಬರಾಜು ಸೇವೆಗಳ ವಿತರಣೆಯಲ್ಲಿ ಒಟ್ಟಾರೆ ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ರಾಜ್ಯ ಸರ್ಕಾರವನ್ನು ಬೆಂಬಲಿಸುತ್ತದೆ ಎಂದು ಹೇಳಿಕೆ ತಿಳಿಸಿದೆ.

ಈ ಕಾರ್ಯಕ್ರಮದ ಅಡಿಯಲ್ಲಿ, ನೀರಿನ ಸಂಗ್ರಹಣಾ ಸಾಮರ್ಥ್ಯ ಮತ್ತು ಅಂತರ್ಜಲ ಮರುಪೂರಣವನ್ನು ಹೆಚ್ಚಿಸಲು ಸಹಾಯ ಮಾಡಲು ಏಳು ನೀರಿನ ಸೆಳೆತವಿರುವ ಜಿಲ್ಲೆಗಳಲ್ಲಿ ಸುಮಾರು 500 ಗ್ರಾಮೀಣ ನೀರಿನ ಜಲಾಶಯಗಳನ್ನು ಪುನರುಜ್ಜೀವನಗೊಳಿಸಲಾಗುವುದು ಎಂದಿದೆ.

ವಿಶ್ವ ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯವು ಕನಿಷ್ಠ 500 ಗ್ರಾಮ ಪಂಚಾಯಿತಿಗಳಲ್ಲಿ 24/7 ನೀರು ಸರಬರಾಜು ಸೇವೆಯನ್ನು ನೀಡಲು ಪ್ರಯತ್ನಿಸುತ್ತದೆ ಎಂದು ಕಾರ್ಯಕ್ರಮದ ಟಾಸ್ಕ್ ಟೀಮ್ ಲೀಡರ್‌ಗಳಾದ ಕ್ರಿಸ್ಟೋಫರ್ ವೆಲ್ಸಿಯನ್ ಮತ್ತು ಮರಿಯಪ್ಪ ಕುಳ್ಳಪ್ಪ ಹೇಳಿದರು.

ಅಲ್ಲದೆ, ಈ ಕಾರ್ಯಕ್ರಮವು ಗ್ರಾಮೀಣ ಭಾಗದಲ್ಲಿ ನೀರಿನ ವಿತರಣೆಗಾಗಿ ಸುಧಾರಿತ ವಲಯದ ಮೇಲ್ವಿಚಾರಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತದೆ ಮತ್ತು ಸುಮಾರು 3,000 ಗ್ರಾಮೀಣ ಮಹಿಳೆಯರಿಗೆ ಪ್ಲಂಬರ್‌ಗಳಾಗಿ ಕೆಲಸ ಮಾಡಲು ಕೆಲಸದ ಕೌಶಲ್ಯ ತರಬೇತಿಯನ್ನು ನೀಡುತ್ತದೆ. ಈ ಸಾಲವು ಎರಡು ವರ್ಷಗಳ ಗ್ರೇಸ್ ಅವಧಿ ಸೇರಿದಂತೆ 13.5 ವರ್ಷಗಳ ಅವಧಿಯನ್ನು ಹೊಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

9 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

11 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

12 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

22 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

23 hours ago