ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

April 23, 2022
12:09 PM

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.

ಓದು ಅವರವರ ಭಾವಕ್ಕೆ , ಆಯ್ಕೆಯ ಮೇಲೆ ಅವಲಂಬಿತ. ಇಲ್ಲಿ ನಮ್ಮ ಆರಿಸುವ ಜಾಣ್ಮೆ ಮುಖ್ಯವಾಗಿರುತ್ತವೆ. ಎಷ್ಟೋ ಒಳ್ಳೆಯ ಪುಸ್ತಕ ಗಳು ಓದುಗರನ್ನು ತಲುಪದೇ ಇರಬಹುದು. ಗಡಿಬಿಡಿಯಲ್ಲಿ ನಾವು ಯಾವತ್ತೂ ಗ್ರಂಥಾಲಯ ಅಥವಾ ಪುಸ್ತಕಗಳ ಅಂಗಡಿಗೆ ಹೋಗಬಾರದು. ಬಹಳಷ್ಟು ಸಮಯ ನಮಗೆ ಇದ್ದಾಗ ತಾಳ್ಮೆಯಿಂದ ಆಯ್ಕೆ ಮಾಡಬಹುದು. ಓದುಗ ವರ್ಗ ಇಂದು ವಿಸ್ತಾರವಾಗಿದೆ, ಆಯ್ಕೆಯೂ ಕೂಡ. ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಪುಸ್ತಕಗಳು ಪ್ರಕಟಗೊಳ್ಳುತ್ತಿವೆ. ಮನರಂಜನೆ, ಜ್ಞಾನವರ್ಧನೆಗಾಗಿ, ಆರೋಗ್ಯ ಸಂಬಂದಿ, ವೈಜ್ಞಾನಿಕ, ತಂತ್ರಜ್ಞಾನ, ಮಕ್ಕಳ ಪುಸ್ತಕಗಳು ಅಲ್ಲದೆ ಇನ್ನೂ ಬೇಕಾದಷ್ಟು ರೀತಿಯ ಪುಸ್ತಕ ಗಳು ಪ್ರಕಟವಾಗುತ್ತಿವೆ. ಓದುಗ ವರ್ಗವೂ ಬೆಳೆಯುತ್ತಿರುವುದು ಸಂತಸದ ಸಂಗತಿ.
1995 ರಲ್ಲಿ ಯುನೆಸ್ಕೋ ಮೊದಲ ಬಾರಿಗೆ ವಿಶ್ವ ಪುಸ್ತಕ ದಿನಾಚರಣೆಯ ಘೋಷಣೆ ಮಾಡಿತು. ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯ ಗಳ ಬಗ್ಗೆ ಅರಿವು ಮತ್ತು ಪ್ರಚಾರ ಇದರ ಉದ್ದೇಶ.

ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror