Advertisement
ಅನುಕ್ರಮ

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

Share

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.

Advertisement
Advertisement
ಓದು ಅವರವರ ಭಾವಕ್ಕೆ , ಆಯ್ಕೆಯ ಮೇಲೆ ಅವಲಂಬಿತ. ಇಲ್ಲಿ ನಮ್ಮ ಆರಿಸುವ ಜಾಣ್ಮೆ ಮುಖ್ಯವಾಗಿರುತ್ತವೆ. ಎಷ್ಟೋ ಒಳ್ಳೆಯ ಪುಸ್ತಕ ಗಳು ಓದುಗರನ್ನು ತಲುಪದೇ ಇರಬಹುದು. ಗಡಿಬಿಡಿಯಲ್ಲಿ ನಾವು ಯಾವತ್ತೂ ಗ್ರಂಥಾಲಯ ಅಥವಾ ಪುಸ್ತಕಗಳ ಅಂಗಡಿಗೆ ಹೋಗಬಾರದು. ಬಹಳಷ್ಟು ಸಮಯ ನಮಗೆ ಇದ್ದಾಗ ತಾಳ್ಮೆಯಿಂದ ಆಯ್ಕೆ ಮಾಡಬಹುದು. ಓದುಗ ವರ್ಗ ಇಂದು ವಿಸ್ತಾರವಾಗಿದೆ, ಆಯ್ಕೆಯೂ ಕೂಡ. ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಪುಸ್ತಕಗಳು ಪ್ರಕಟಗೊಳ್ಳುತ್ತಿವೆ. ಮನರಂಜನೆ, ಜ್ಞಾನವರ್ಧನೆಗಾಗಿ, ಆರೋಗ್ಯ ಸಂಬಂದಿ, ವೈಜ್ಞಾನಿಕ, ತಂತ್ರಜ್ಞಾನ, ಮಕ್ಕಳ ಪುಸ್ತಕಗಳು ಅಲ್ಲದೆ ಇನ್ನೂ ಬೇಕಾದಷ್ಟು ರೀತಿಯ ಪುಸ್ತಕ ಗಳು ಪ್ರಕಟವಾಗುತ್ತಿವೆ. ಓದುಗ ವರ್ಗವೂ ಬೆಳೆಯುತ್ತಿರುವುದು ಸಂತಸದ ಸಂಗತಿ.
1995 ರಲ್ಲಿ ಯುನೆಸ್ಕೋ ಮೊದಲ ಬಾರಿಗೆ ವಿಶ್ವ ಪುಸ್ತಕ ದಿನಾಚರಣೆಯ ಘೋಷಣೆ ಮಾಡಿತು. ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯ ಗಳ ಬಗ್ಗೆ ಅರಿವು ಮತ್ತು ಪ್ರಚಾರ ಇದರ ಉದ್ದೇಶ.

ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

13 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

13 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

13 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

14 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

14 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

14 hours ago