Advertisement
ಅನುಕ್ರಮ

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

Share

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.

ಓದು ಅವರವರ ಭಾವಕ್ಕೆ , ಆಯ್ಕೆಯ ಮೇಲೆ ಅವಲಂಬಿತ. ಇಲ್ಲಿ ನಮ್ಮ ಆರಿಸುವ ಜಾಣ್ಮೆ ಮುಖ್ಯವಾಗಿರುತ್ತವೆ. ಎಷ್ಟೋ ಒಳ್ಳೆಯ ಪುಸ್ತಕ ಗಳು ಓದುಗರನ್ನು ತಲುಪದೇ ಇರಬಹುದು. ಗಡಿಬಿಡಿಯಲ್ಲಿ ನಾವು ಯಾವತ್ತೂ ಗ್ರಂಥಾಲಯ ಅಥವಾ ಪುಸ್ತಕಗಳ ಅಂಗಡಿಗೆ ಹೋಗಬಾರದು. ಬಹಳಷ್ಟು ಸಮಯ ನಮಗೆ ಇದ್ದಾಗ ತಾಳ್ಮೆಯಿಂದ ಆಯ್ಕೆ ಮಾಡಬಹುದು. ಓದುಗ ವರ್ಗ ಇಂದು ವಿಸ್ತಾರವಾಗಿದೆ, ಆಯ್ಕೆಯೂ ಕೂಡ. ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಪುಸ್ತಕಗಳು ಪ್ರಕಟಗೊಳ್ಳುತ್ತಿವೆ. ಮನರಂಜನೆ, ಜ್ಞಾನವರ್ಧನೆಗಾಗಿ, ಆರೋಗ್ಯ ಸಂಬಂದಿ, ವೈಜ್ಞಾನಿಕ, ತಂತ್ರಜ್ಞಾನ, ಮಕ್ಕಳ ಪುಸ್ತಕಗಳು ಅಲ್ಲದೆ ಇನ್ನೂ ಬೇಕಾದಷ್ಟು ರೀತಿಯ ಪುಸ್ತಕ ಗಳು ಪ್ರಕಟವಾಗುತ್ತಿವೆ. ಓದುಗ ವರ್ಗವೂ ಬೆಳೆಯುತ್ತಿರುವುದು ಸಂತಸದ ಸಂಗತಿ.
1995 ರಲ್ಲಿ ಯುನೆಸ್ಕೋ ಮೊದಲ ಬಾರಿಗೆ ವಿಶ್ವ ಪುಸ್ತಕ ದಿನಾಚರಣೆಯ ಘೋಷಣೆ ಮಾಡಿತು. ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯ ಗಳ ಬಗ್ಗೆ ಅರಿವು ಮತ್ತು ಪ್ರಚಾರ ಇದರ ಉದ್ದೇಶ.

ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

19 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

22 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago