Advertisement
ಅನುಕ್ರಮ

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

Share

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.

Advertisement
ಓದು ಅವರವರ ಭಾವಕ್ಕೆ , ಆಯ್ಕೆಯ ಮೇಲೆ ಅವಲಂಬಿತ. ಇಲ್ಲಿ ನಮ್ಮ ಆರಿಸುವ ಜಾಣ್ಮೆ ಮುಖ್ಯವಾಗಿರುತ್ತವೆ. ಎಷ್ಟೋ ಒಳ್ಳೆಯ ಪುಸ್ತಕ ಗಳು ಓದುಗರನ್ನು ತಲುಪದೇ ಇರಬಹುದು. ಗಡಿಬಿಡಿಯಲ್ಲಿ ನಾವು ಯಾವತ್ತೂ ಗ್ರಂಥಾಲಯ ಅಥವಾ ಪುಸ್ತಕಗಳ ಅಂಗಡಿಗೆ ಹೋಗಬಾರದು. ಬಹಳಷ್ಟು ಸಮಯ ನಮಗೆ ಇದ್ದಾಗ ತಾಳ್ಮೆಯಿಂದ ಆಯ್ಕೆ ಮಾಡಬಹುದು. ಓದುಗ ವರ್ಗ ಇಂದು ವಿಸ್ತಾರವಾಗಿದೆ, ಆಯ್ಕೆಯೂ ಕೂಡ. ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಪುಸ್ತಕಗಳು ಪ್ರಕಟಗೊಳ್ಳುತ್ತಿವೆ. ಮನರಂಜನೆ, ಜ್ಞಾನವರ್ಧನೆಗಾಗಿ, ಆರೋಗ್ಯ ಸಂಬಂದಿ, ವೈಜ್ಞಾನಿಕ, ತಂತ್ರಜ್ಞಾನ, ಮಕ್ಕಳ ಪುಸ್ತಕಗಳು ಅಲ್ಲದೆ ಇನ್ನೂ ಬೇಕಾದಷ್ಟು ರೀತಿಯ ಪುಸ್ತಕ ಗಳು ಪ್ರಕಟವಾಗುತ್ತಿವೆ. ಓದುಗ ವರ್ಗವೂ ಬೆಳೆಯುತ್ತಿರುವುದು ಸಂತಸದ ಸಂಗತಿ.
1995 ರಲ್ಲಿ ಯುನೆಸ್ಕೋ ಮೊದಲ ಬಾರಿಗೆ ವಿಶ್ವ ಪುಸ್ತಕ ದಿನಾಚರಣೆಯ ಘೋಷಣೆ ಮಾಡಿತು. ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯ ಗಳ ಬಗ್ಗೆ ಅರಿವು ಮತ್ತು ಪ್ರಚಾರ ಇದರ ಉದ್ದೇಶ.

ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

11 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago