Advertisement
ಅನುಕ್ರಮ

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

Share

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.

ಓದು ಅವರವರ ಭಾವಕ್ಕೆ , ಆಯ್ಕೆಯ ಮೇಲೆ ಅವಲಂಬಿತ. ಇಲ್ಲಿ ನಮ್ಮ ಆರಿಸುವ ಜಾಣ್ಮೆ ಮುಖ್ಯವಾಗಿರುತ್ತವೆ. ಎಷ್ಟೋ ಒಳ್ಳೆಯ ಪುಸ್ತಕ ಗಳು ಓದುಗರನ್ನು ತಲುಪದೇ ಇರಬಹುದು. ಗಡಿಬಿಡಿಯಲ್ಲಿ ನಾವು ಯಾವತ್ತೂ ಗ್ರಂಥಾಲಯ ಅಥವಾ ಪುಸ್ತಕಗಳ ಅಂಗಡಿಗೆ ಹೋಗಬಾರದು. ಬಹಳಷ್ಟು ಸಮಯ ನಮಗೆ ಇದ್ದಾಗ ತಾಳ್ಮೆಯಿಂದ ಆಯ್ಕೆ ಮಾಡಬಹುದು. ಓದುಗ ವರ್ಗ ಇಂದು ವಿಸ್ತಾರವಾಗಿದೆ, ಆಯ್ಕೆಯೂ ಕೂಡ. ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಪುಸ್ತಕಗಳು ಪ್ರಕಟಗೊಳ್ಳುತ್ತಿವೆ. ಮನರಂಜನೆ, ಜ್ಞಾನವರ್ಧನೆಗಾಗಿ, ಆರೋಗ್ಯ ಸಂಬಂದಿ, ವೈಜ್ಞಾನಿಕ, ತಂತ್ರಜ್ಞಾನ, ಮಕ್ಕಳ ಪುಸ್ತಕಗಳು ಅಲ್ಲದೆ ಇನ್ನೂ ಬೇಕಾದಷ್ಟು ರೀತಿಯ ಪುಸ್ತಕ ಗಳು ಪ್ರಕಟವಾಗುತ್ತಿವೆ. ಓದುಗ ವರ್ಗವೂ ಬೆಳೆಯುತ್ತಿರುವುದು ಸಂತಸದ ಸಂಗತಿ.
1995 ರಲ್ಲಿ ಯುನೆಸ್ಕೋ ಮೊದಲ ಬಾರಿಗೆ ವಿಶ್ವ ಪುಸ್ತಕ ದಿನಾಚರಣೆಯ ಘೋಷಣೆ ಮಾಡಿತು. ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯ ಗಳ ಬಗ್ಗೆ ಅರಿವು ಮತ್ತು ಪ್ರಚಾರ ಇದರ ಉದ್ದೇಶ.

ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago