Advertisement
ಅನುಕ್ರಮ

ಇಂದು ವಿಶ್ವ ಪುಸ್ತಕ ದಿನ | ಪುಸ್ತಕ ಓದೋಣ… ಉತ್ತಮ ಸ್ನೇಹಿತನ ಆಯ್ಕೆ ಮಾಡೋಣ… |

Share

ಸಮಯವಿದ್ದಾಗ ಓದುವುದಕ್ಕಿಂತ ಸಮಯ ಮಾಡಿಕೊಂಡು ಓದುವುದು ಉತ್ತಮ ಯಾರು ಪುಸ್ತಕಗಳನ್ನು ಪ್ರೀತಿಸುತ್ತಾರೋ ಅವರು ಏಕಾಂಗಿತನವನ್ನು ಯಾವತ್ತೂ ಅನುಭವಿಸಲಾರರು. ಜೀವನದಲ್ಲಿ ಉತ್ತಮ ಸ್ನೇಹಿತ ಅಂತ ಇರುವುದಾದರೆ ಅವುಗಳು ಪುಸ್ತಕಗಳೇ ಸರಿ. ಪುಸ್ತಕ ಓದುವಿಕೆ ಸಂತೋಷ, ಮಾನಸಿಕ ನೆಮ್ಮದಿ, ಜ್ಞಾನ, ವೃಧ್ದಿಸುವ ಶಬ್ದಭಂಡಾರ, ಭಾಷಾ ಕೌಶಲ್ಯ ಎಲ್ಲವನ್ನೂ ಕೊಡುತ್ತದೆ . ಪ್ರತಿಯಾಗಿ ನಮ್ಮ ಸಮಯವನ್ನು ಮಾತ್ರ ಬಯಸುತ್ತದೆ.

ಓದು ಅವರವರ ಭಾವಕ್ಕೆ , ಆಯ್ಕೆಯ ಮೇಲೆ ಅವಲಂಬಿತ. ಇಲ್ಲಿ ನಮ್ಮ ಆರಿಸುವ ಜಾಣ್ಮೆ ಮುಖ್ಯವಾಗಿರುತ್ತವೆ. ಎಷ್ಟೋ ಒಳ್ಳೆಯ ಪುಸ್ತಕ ಗಳು ಓದುಗರನ್ನು ತಲುಪದೇ ಇರಬಹುದು. ಗಡಿಬಿಡಿಯಲ್ಲಿ ನಾವು ಯಾವತ್ತೂ ಗ್ರಂಥಾಲಯ ಅಥವಾ ಪುಸ್ತಕಗಳ ಅಂಗಡಿಗೆ ಹೋಗಬಾರದು. ಬಹಳಷ್ಟು ಸಮಯ ನಮಗೆ ಇದ್ದಾಗ ತಾಳ್ಮೆಯಿಂದ ಆಯ್ಕೆ ಮಾಡಬಹುದು. ಓದುಗ ವರ್ಗ ಇಂದು ವಿಸ್ತಾರವಾಗಿದೆ, ಆಯ್ಕೆಯೂ ಕೂಡ. ಎಲ್ಲಾ ವಿಭಾಗಗಳಲ್ಲೂ ಸಾಕಷ್ಟು ಪುಸ್ತಕಗಳು ಪ್ರಕಟಗೊಳ್ಳುತ್ತಿವೆ. ಮನರಂಜನೆ, ಜ್ಞಾನವರ್ಧನೆಗಾಗಿ, ಆರೋಗ್ಯ ಸಂಬಂದಿ, ವೈಜ್ಞಾನಿಕ, ತಂತ್ರಜ್ಞಾನ, ಮಕ್ಕಳ ಪುಸ್ತಕಗಳು ಅಲ್ಲದೆ ಇನ್ನೂ ಬೇಕಾದಷ್ಟು ರೀತಿಯ ಪುಸ್ತಕ ಗಳು ಪ್ರಕಟವಾಗುತ್ತಿವೆ. ಓದುಗ ವರ್ಗವೂ ಬೆಳೆಯುತ್ತಿರುವುದು ಸಂತಸದ ಸಂಗತಿ.
1995 ರಲ್ಲಿ ಯುನೆಸ್ಕೋ ಮೊದಲ ಬಾರಿಗೆ ವಿಶ್ವ ಪುಸ್ತಕ ದಿನಾಚರಣೆಯ ಘೋಷಣೆ ಮಾಡಿತು. ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯ ಗಳ ಬಗ್ಗೆ ಅರಿವು ಮತ್ತು ಪ್ರಚಾರ ಇದರ ಉದ್ದೇಶ.

ಬನ್ನಿ ಪುಸ್ತಕ ಓದೋಣ. “ಪ್ರತಿಯೊಬ್ಬ ವ್ಯಕ್ತಿಯೂ ಒಂದು ಪುಸ್ತಕ, ಪ್ರತಿವರ್ಷ ವೂ ಒಂದು ಅಧ್ಯಾಯ”

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

15 minutes ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

59 minutes ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

15 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

15 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago