ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಸಾಧನೆಗೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ. ಡಿ.ಗುಕೇಶ್ ಚದುರಂಗದ ಆಟದಲ್ಲಿ ಜಾಗತಿಕವಾಗಿ ವಿಶ್ವ ಶ್ರೇಷ್ಠ ಸಾಧನೆ ಮಾಡಿದ್ದು, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಂದ ಪ್ರೇರಣೆ ಪಡದು ಯುವ ಕ್ರೀಡಾಪಟುಗಳು ಮುನ್ನಡೆಯಬೇಕು. ತಮ್ಮ ಅಗಾಧ ಪರಿಶ್ರಮದಿಂದ ಸಾಧನೆಯ ಮೈಲಿಗಲ್ಲು ಸ್ಥಾಪಿಸಬೇಕೆಂದು ಕರೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel