ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

June 5, 2023
2:21 PM

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ
ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror