ಸುದ್ದಿಗಳು

ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

Advertisement
Advertisement

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

17 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

18 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

19 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

20 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

21 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago