Advertisement
ಸುದ್ದಿಗಳು

ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

Share

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

Advertisement
Advertisement

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

6 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago