Advertisement
ಸುದ್ದಿಗಳು

ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

Share

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

45 minutes ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 hour ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

15 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago