Advertisement
ಸುದ್ದಿಗಳು

ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

Share

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 hour ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 hour ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

2 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

2 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

2 hours ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

11 hours ago