Advertisement
ಸುದ್ದಿಗಳು

ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

Share

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

6 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

8 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

14 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago