ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.
ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.
ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…