ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

June 5, 2026
7:59 PM
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ ಹೇಳಿದರು.

ಪರಿಸರ, ನೀರು ಮತ್ತು ಆಹಾರ ಶುಚಿಯಾಗಿದ್ದರೆ ಜೀವಸಂಕುಲದ ರಕ್ಷಣೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿ ಇಟ್ಟು ರಕ್ಷಿಸಬೇಕು ಎಂದು ದರ್ಶನ್ ಎಚ್.ವಿ ಕರೆ ನೀಡಿದರು.

ಮಂಗಳೂರು ನಗರದ ಕೆಪಿಟಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಂಡರೆ ಸಮಾಜವೂ ಉತ್ತಮ ಪರಿಸರವನ್ನು ಹೊಂದಲು ಸಾಧ್ಯವಾಗುತ್ತದೆ. ಆಧುನಿಕ ಜೀವನಶೈಲಿಯ ಒತ್ತಡಗಳಿಂದ ಪರಿಸರ ಹಾನಿಯಾಗುತ್ತಿದ್ದು, ಮುಂದಿನ ಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜೈಬುನ್ನಿಸಾ, ಪರಿಸರ ನಾಶದಿಂದ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಪರಿಸರವನ್ನು ಉಳಿಸಿದರೆ ಪರಿಸರವೇ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಿದರು.

Advertisement

ಸಮಾರಂಭದಲ್ಲಿ ಜಯಲಕ್ಷ್ಮಿ ರಾಯಕೋಡ, ರಾಜಶೇಖರ ಪುರಾಣಿಕ್, ಹರೀಶ್ ಶೆಟ್ಟಿ, ಶ್ರೀ ನಿಕೇತನ್, ಮಂಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜೊತೆಗೆ ಸೀಡ್ ಬಾಲ್‌ಗಳು ಮತ್ತು ಬಟ್ಟೆ ಬ್ಯಾಗ್‌ಗಳನ್ನು ಹಂಚಲಾಯಿತು.

Advertisement

ಇದಕ್ಕೂ ಮುನ್ನ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯೆಯ್ಯಾಡಿಯಿಂದ ಕೆಪಿಟಿವರೆಗೆ ಜಾಥಾ ನಡೆಸಲಾಯಿತು. ಜಾಥಾಕ್ಕೆ ಬಸವರಾಜ್ ಚಾಲನೆ ನೀಡಿದರು.

Dakshina Kannada Deputy Commissioner Darshan H.V. said environmental protection is the responsibility of every citizen and urged people to maintain cleanliness around their surroundings. Speaking at the World Environment Day programme in Mangaluru, he emphasized that protecting nature is essential for the well-being of future generations.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror