ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.
“ತಾಯಿಯ ಹೆಸರಲ್ಲಿ- ಒಂದು ಸಸಿ” ಅಭಿಯಾನದಡಿ ಪ್ರಧಾನಿ ಅವರು, ಆಲದ ಸಸಿ ನೆಟ್ಟು ನೀರೆರೆದರು.ಈ ವೇಳೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ದೆಹಲಿ,ರಾಜಸ್ತಾನ, ಹರಿಯಾಣ ಮತ್ತು ಗುಜರಾತ್ ರಾಜ್ಯಗಳ ಒಟ್ಟು 29 ಜಿಲ್ಲೆಗಳ ವ್ಯಾಪ್ತಿಯ ಅರಾವಳಿ ಗಿರಿಶ್ರೇಣಿಯಲ್ಲಿ, ಸಸ್ಯ ಸಂಪತ್ತು ವೃದ್ಧಿಸುವ, ಅರಾವಳಿ ಹಸಿರು ಗೋಡೆ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು. ಸುಮಾರು 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ, ಅರಣ್ಯೀಕರಣ, ಜಲಮೂಲಗಳ ವೃದ್ಧಿ ಹಾಗೂ ಜೀವ ವೈವಿಧ್ಯ ವೃದ್ಧಿಪಡಿಸುವ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ಮಹತ್ವದ ಯೋಜನೆ ಇದಾಗಿದೆ. ಇದೇ ವೇಳೆ ಪ್ರಧಾನಿ , ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದಡಿ 200 ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490