ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.
“ತಾಯಿಯ ಹೆಸರಲ್ಲಿ- ಒಂದು ಸಸಿ” ಅಭಿಯಾನದಡಿ ಪ್ರಧಾನಿ ಅವರು, ಆಲದ ಸಸಿ ನೆಟ್ಟು ನೀರೆರೆದರು.ಈ ವೇಳೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ದೆಹಲಿ,ರಾಜಸ್ತಾನ, ಹರಿಯಾಣ ಮತ್ತು ಗುಜರಾತ್ ರಾಜ್ಯಗಳ ಒಟ್ಟು 29 ಜಿಲ್ಲೆಗಳ ವ್ಯಾಪ್ತಿಯ ಅರಾವಳಿ ಗಿರಿಶ್ರೇಣಿಯಲ್ಲಿ, ಸಸ್ಯ ಸಂಪತ್ತು ವೃದ್ಧಿಸುವ, ಅರಾವಳಿ ಹಸಿರು ಗೋಡೆ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು. ಸುಮಾರು 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ, ಅರಣ್ಯೀಕರಣ, ಜಲಮೂಲಗಳ ವೃದ್ಧಿ ಹಾಗೂ ಜೀವ ವೈವಿಧ್ಯ ವೃದ್ಧಿಪಡಿಸುವ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ಮಹತ್ವದ ಯೋಜನೆ ಇದಾಗಿದೆ. ಇದೇ ವೇಳೆ ಪ್ರಧಾನಿ , ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದಡಿ 200 ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…