ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.
“ತಾಯಿಯ ಹೆಸರಲ್ಲಿ- ಒಂದು ಸಸಿ” ಅಭಿಯಾನದಡಿ ಪ್ರಧಾನಿ ಅವರು, ಆಲದ ಸಸಿ ನೆಟ್ಟು ನೀರೆರೆದರು.ಈ ವೇಳೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ದೆಹಲಿ,ರಾಜಸ್ತಾನ, ಹರಿಯಾಣ ಮತ್ತು ಗುಜರಾತ್ ರಾಜ್ಯಗಳ ಒಟ್ಟು 29 ಜಿಲ್ಲೆಗಳ ವ್ಯಾಪ್ತಿಯ ಅರಾವಳಿ ಗಿರಿಶ್ರೇಣಿಯಲ್ಲಿ, ಸಸ್ಯ ಸಂಪತ್ತು ವೃದ್ಧಿಸುವ, ಅರಾವಳಿ ಹಸಿರು ಗೋಡೆ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು. ಸುಮಾರು 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ, ಅರಣ್ಯೀಕರಣ, ಜಲಮೂಲಗಳ ವೃದ್ಧಿ ಹಾಗೂ ಜೀವ ವೈವಿಧ್ಯ ವೃದ್ಧಿಪಡಿಸುವ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ಮಹತ್ವದ ಯೋಜನೆ ಇದಾಗಿದೆ. ಇದೇ ವೇಳೆ ಪ್ರಧಾನಿ , ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದಡಿ 200 ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…