ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ದೆಹಲಿಯ ಭಗವಾನ್ ಮಹಾವೀರ್ ವನಸ್ಥಲಿ ಉದ್ಯಾನದಲ್ಲಿ ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು.
“ತಾಯಿಯ ಹೆಸರಲ್ಲಿ- ಒಂದು ಸಸಿ” ಅಭಿಯಾನದಡಿ ಪ್ರಧಾನಿ ಅವರು, ಆಲದ ಸಸಿ ನೆಟ್ಟು ನೀರೆರೆದರು.ಈ ವೇಳೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ದೆಹಲಿ,ರಾಜಸ್ತಾನ, ಹರಿಯಾಣ ಮತ್ತು ಗುಜರಾತ್ ರಾಜ್ಯಗಳ ಒಟ್ಟು 29 ಜಿಲ್ಲೆಗಳ ವ್ಯಾಪ್ತಿಯ ಅರಾವಳಿ ಗಿರಿಶ್ರೇಣಿಯಲ್ಲಿ, ಸಸ್ಯ ಸಂಪತ್ತು ವೃದ್ಧಿಸುವ, ಅರಾವಳಿ ಹಸಿರು ಗೋಡೆ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು. ಸುಮಾರು 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ, ಅರಣ್ಯೀಕರಣ, ಜಲಮೂಲಗಳ ವೃದ್ಧಿ ಹಾಗೂ ಜೀವ ವೈವಿಧ್ಯ ವೃದ್ಧಿಪಡಿಸುವ ಮತ್ತು ಮಣ್ಣಿನ ಫಲವತ್ತತೆ ಹೆಚ್ಚಿಸುವ ಮಹತ್ವದ ಯೋಜನೆ ಇದಾಗಿದೆ. ಇದೇ ವೇಳೆ ಪ್ರಧಾನಿ , ದೆಹಲಿ ಸರ್ಕಾರದ ಸುಸ್ಥಿರ ಸಾರಿಗೆ ಉಪಕ್ರಮದಡಿ 200 ಎಲೆಕ್ಟ್ರಿಕ್ ಬಸ್ ಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…