Advertisement
MIRROR FOCUS

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

Share
ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ ಹಳ್ಳಿ ಚಿತ್ರವೇ.
ಪರಿಸರ ನಮಗೇನೆಲ್ಲಾ ಕೊಟ್ಟಿದೆ. ತನ್ನೊಳಗಿರುವುದನ್ನೇಲ್ಲಾ ಬಗೆಬಗೆದೇ ಕೊಟ್ಟಾಗಿದೆ. ಶುದ್ಧ ಗಾಳಿ, ನೀರು, ಫಲವತ್ತಾದ ಮಣ್ಣು ಎಲ್ಲವನ್ನೂ  ನಮಗೆ ಕೊಟ್ಟಿದೆ. ಇದರ ಮಡಿಲಲ್ಲಿ ನಮ್ಮನ್ನು ಮಕ್ಕಳಂತೆ ಸಲಹುತ್ತಿದೆ.  ಆದರೆ ನಾವು ಕೊಟ್ಟದ್ದಾದರೂ ಏನು?   ಬರೀ ನೋವನ್ನು.   ನಮ್ಮ ಸುಂದರ ಪರಿಸರ  ನಿರಂತರ ದಬ್ಬಾಳಿಕೆಗೆ  ನಲುಗಿ ಹೋಗಿದೆ.  ಯಾವ ರೀತಿ ರೀತಿ ಎಲ್ಲಾ ಸಾದ್ಯವೋ ಆ ರೀತಿಯೆಲ್ಲಾ  ಉಪಯೋಗಿಸಿ ಕೊಂಡಿದ್ದೇವೆ.  ಒಂದೇ ಎರಡೇ ಹಲವು ರೀತಿಯ ಮಾಲಿನ್ಯಗಳು ನಿಯಂತ್ರಣ ಮೀರಿ  ನಡೆಯುತ್ತಿದೆ. ವಾಯು, ಜಲ, ಶಬ್ದ ಮಾಲಿನ್ಯ ಗಳು ಸೇರಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ.  ಇದರ ಕುರಿತು ಜಾಗೃತಿ ಮೂಡಿಸುವ  ಸಲುವಾಗಿ ವಿಶ್ವದಾದ್ಯಂತ ಜೂನ್ 5 ರಂದು   ‘ವಿಶ್ವ ಪರಿಸರ ದಿನ’ ವೆಂದು ಆಚರಿಸಲಾಗುತ್ತದೆ.  1974  ನೇ ಇಸವಿಯಿಂದ ಈ ಆಚರಣೆ ಆರಂಭವಾಯಿತು.   ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ರೀತಿಯ ಕಾರ್ಯಗಳನ್ನು ಜಗತ್ತಿನಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದೆ.
ಅನಿರೀಕ್ಷಿತವಾಗಿ  ಬಂದೆರಗಿದ   ಕೋವಿಡ್, ಜನರನ್ನು  ಪರಿಸರದತ್ತ ಮುಖ ಮಾಡುವಂತೆ ಮಾಡಿದೆ.   ಕೃತಕತೆಯಿಂದ ಹೊರಬಂದು ನೈಜತೆಯಲ್ಲಿ ಬದುಕುವ ದಾರಿಯನ್ನು ಕಂಡುಕೊಳ್ಳ ಬೇಕಾದ ಅಗತ್ಯ ಮನಗಾಣುವ ಸಮಯ ಮನುಜನದ್ದು.  ಮನಸು‌ ಶುದ್ಧ ವಾಗಿದ್ದಾಗ ನೋಡುವ ದೃಷ್ಟಿ ಯೂ ಶುದ್ಧವಾಗಿರುತ್ತದೆ. ಮನಸಿನ ಕೊಳಕನ್ನು ದೂರ ಮಾಡಿ ಪರಿಸರದತ್ತ ಮುಖ ಮಾಡುವುದೇ  ನಾವು ಪ್ರಕೃತಿಗೆ  ಕೊಡುವ ಉಡುಗೊರೆ.
“ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ” ಈ ಬಾರಿಯ ಘೋಷ ವಾಕ್ಯ.
ಬನ್ನಿ ಪ್ರಕೃತಿಯ  ಮತ್ತೆ ಹಸಿರು ಮಾಡುವಲ್ಲಿ ಕೈ ಜೋಡಿಸೋಣ ಆಗದೇ?
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago