Advertisement
MIRROR FOCUS

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

Share
ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ ಹಳ್ಳಿ ಚಿತ್ರವೇ.
ಪರಿಸರ ನಮಗೇನೆಲ್ಲಾ ಕೊಟ್ಟಿದೆ. ತನ್ನೊಳಗಿರುವುದನ್ನೇಲ್ಲಾ ಬಗೆಬಗೆದೇ ಕೊಟ್ಟಾಗಿದೆ. ಶುದ್ಧ ಗಾಳಿ, ನೀರು, ಫಲವತ್ತಾದ ಮಣ್ಣು ಎಲ್ಲವನ್ನೂ  ನಮಗೆ ಕೊಟ್ಟಿದೆ. ಇದರ ಮಡಿಲಲ್ಲಿ ನಮ್ಮನ್ನು ಮಕ್ಕಳಂತೆ ಸಲಹುತ್ತಿದೆ.  ಆದರೆ ನಾವು ಕೊಟ್ಟದ್ದಾದರೂ ಏನು?   ಬರೀ ನೋವನ್ನು.   ನಮ್ಮ ಸುಂದರ ಪರಿಸರ  ನಿರಂತರ ದಬ್ಬಾಳಿಕೆಗೆ  ನಲುಗಿ ಹೋಗಿದೆ.  ಯಾವ ರೀತಿ ರೀತಿ ಎಲ್ಲಾ ಸಾದ್ಯವೋ ಆ ರೀತಿಯೆಲ್ಲಾ  ಉಪಯೋಗಿಸಿ ಕೊಂಡಿದ್ದೇವೆ.  ಒಂದೇ ಎರಡೇ ಹಲವು ರೀತಿಯ ಮಾಲಿನ್ಯಗಳು ನಿಯಂತ್ರಣ ಮೀರಿ  ನಡೆಯುತ್ತಿದೆ. ವಾಯು, ಜಲ, ಶಬ್ದ ಮಾಲಿನ್ಯ ಗಳು ಸೇರಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ.  ಇದರ ಕುರಿತು ಜಾಗೃತಿ ಮೂಡಿಸುವ  ಸಲುವಾಗಿ ವಿಶ್ವದಾದ್ಯಂತ ಜೂನ್ 5 ರಂದು   ‘ವಿಶ್ವ ಪರಿಸರ ದಿನ’ ವೆಂದು ಆಚರಿಸಲಾಗುತ್ತದೆ.  1974  ನೇ ಇಸವಿಯಿಂದ ಈ ಆಚರಣೆ ಆರಂಭವಾಯಿತು.   ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ರೀತಿಯ ಕಾರ್ಯಗಳನ್ನು ಜಗತ್ತಿನಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದೆ.
ಅನಿರೀಕ್ಷಿತವಾಗಿ  ಬಂದೆರಗಿದ   ಕೋವಿಡ್, ಜನರನ್ನು  ಪರಿಸರದತ್ತ ಮುಖ ಮಾಡುವಂತೆ ಮಾಡಿದೆ.   ಕೃತಕತೆಯಿಂದ ಹೊರಬಂದು ನೈಜತೆಯಲ್ಲಿ ಬದುಕುವ ದಾರಿಯನ್ನು ಕಂಡುಕೊಳ್ಳ ಬೇಕಾದ ಅಗತ್ಯ ಮನಗಾಣುವ ಸಮಯ ಮನುಜನದ್ದು.  ಮನಸು‌ ಶುದ್ಧ ವಾಗಿದ್ದಾಗ ನೋಡುವ ದೃಷ್ಟಿ ಯೂ ಶುದ್ಧವಾಗಿರುತ್ತದೆ. ಮನಸಿನ ಕೊಳಕನ್ನು ದೂರ ಮಾಡಿ ಪರಿಸರದತ್ತ ಮುಖ ಮಾಡುವುದೇ  ನಾವು ಪ್ರಕೃತಿಗೆ  ಕೊಡುವ ಉಡುಗೊರೆ.
“ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ” ಈ ಬಾರಿಯ ಘೋಷ ವಾಕ್ಯ.
ಬನ್ನಿ ಪ್ರಕೃತಿಯ  ಮತ್ತೆ ಹಸಿರು ಮಾಡುವಲ್ಲಿ ಕೈ ಜೋಡಿಸೋಣ ಆಗದೇ?
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

9 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

9 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

11 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

12 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

23 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago